ಬಾವಿಗೆ ಬಿದ್ದು ಮೃತ್ಯು
ಕಾರ್ಕಳ, ಡಿ.12: ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದ ಚೆಲುವರಾಜ್ (48) ಎಂಬವರು ಡಿ.10ರಂದು ರಾತ್ರಿ ಮನೆಗೆ ನಡೆದು ಕೊಂಡು ಹೋಗುತ್ತಿದ್ದಾಗ ಕುಕ್ಕುಂದೂರು ಗ್ರಾಮದ ನಿಜಮಂಡೆ ದರ್ಖಾಸು ಎಂಬಲ್ಲಿರುವ ಪುದ್ದು ಎಂಬವರ ಆವರಣಗೋಡೆ ಇಲ್ಲದ ಬಾವಿಗೆ ಅಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story