ಡಿ.14: 'ಮಾನವೀಯ ಮೌಲ್ಯಗಳು ಪ್ರವಾದಿ ಜೀವನದ ಬೆಳಕಿನಲ್ಲಿ' ಅಭಿಯಾನ ಸಮಾರೋಪ
ಉಡುಪಿ, ಡಿ.13: ಉಡುಪಿ ಜಿಲ್ಲಾ ಜಮಾಅತೆ ಇಸ್ಲಾಮಿ ಹಿಂದ್ ವತಿ ಯಿಂದ ಮಾನವೀಯ ಮೌಲ್ಯಗಳು ಪ್ರವಾದಿ ಜೀವನದ ಬೆಳಕಿನಲ್ಲಿ ಎಂಬ ಶೀರ್ಷಿಕೆ ಯಡಿಯಲ್ಲಿ ಒಂದು ತಿಂಗಳ ಕಾಲ ಹಮ್ಮಿಕೊಳ್ಳಲಾದ ಅಭಿಯಾನದ ಸಮಾರೋಪ ಸಮಾರಂಭವು ಡಿ.14ರಂದು ಸಂಜೆ 6:30ಕ್ಕೆ ಉಡುಪಿಯ ಪುರಭವನದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಕೇಮಾರು ಸಾಂದೀಪನಿ ಮಠದ ಶ್ರೀಈಶ ವಿಠಲ ದಾಸ ಸ್ವಾಮೀಜಿ, ಕವಯತ್ರಿ ಜ್ಯೋತಿ ಗುರುಪ್ರಸಾದ್, ಶಾಂತಿಪ್ರಕಾಶನದ ವ್ಯವಸ್ಥಾಪಕ ಮಹಮ್ಮದ್ ಕುಂಞಿ ಭಾಗವಹಿಸಲಿರುವರು. ಅಧ್ಯಕ್ಷತೆಯನ್ನು ಸದ್ಭಾವನಾ ಮಂಚ್ನ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story