ಗೋಕರ್ಣ: ಅಂಗಡಿ ಬೆಂಕಿಗಾಹುತಿ
ಸಾಂದರ್ಭಿಕ ಚಿತ್ರ
ಕಾರವಾರ, ಡಿ.31: ಹೂವು, ಬಾಳೆಹಣ್ಣು, ತೆಂಗಿನಕಾಯಿ ಸಹಿತ ಪೂಜಾ ಸಾಮಗ್ರಿ ಗಳ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಮೇಲಿನಕೇರಿ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.
ಗೋಕರ್ಣದ ಪುರುಷೋತ್ತಮ ಎಂಬವರ ಮಾಲಕತ್ವದ ಅಂಗಡಿ ಇದಾಗಿದೆ. ಬೆಂಕಿ ಅನಾಹುತಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗಿದೆ. ಅಂಗಡಿಯಲ್ಲಿದ್ದ ಪಟಾಕಿ ಸಂಗ್ರಹ ಹಾಗೂ ಗ್ಯಾಸ್ ಸಿಲಿಂಡರ್ಗೆ ಬೆಂಕಿ ತಗುಲಿದ್ದರಿಂದ ಅಂಗಡಿ ಭಾಗಶಃ ಧ್ವಂಸಗೊಂಡಿದೆ ಎಂದು ತಿಳಿದುಬಂದಿದೆ.
ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಘಟನೆಯಿಂದ ಲಕ್ಷಾಂತರ ರೂ. ವೌಲ್ಯದ ಸೊತ್ತು ನಾಶವಾಗಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story