ಬಸ್ ಢಿಕ್ಕಿ: ಮಹಿಳೆ ಮೃತು
ಕಾರ್ಕಳ, ಜ.11: ಮಿಯ್ಯರು ಗ್ರಾಮದ ಜೋಡುಕಟ್ಟೆ ಬಸ್ ನಿಲ್ದಾಣದ ಎದುರು ಜ.10ರಂದು ಮಧ್ಯಾಹ್ನ ವೇಳೆ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಬೋರ್ಕಟ್ಟೆ ನಿವಾಸಿ ಸುಶೀಲ ಶೆಡ್ತಿ ಎಂದು ಗುರುತಿಸಲಾಗಿದೆ. ಬಜಗೋಳಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಬಸ್ ರಸ್ತೆ ದಾಟುತ್ತಿದ್ದ ಸುಶೀಲ ಶೆಡ್ತಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯ ಗೊಂಡ ಸುಶೀಲ ಶೆಡ್ತಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story