Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಸಮಾಜದ ವಿನ್ಯಾಸ ಬದಲಾದಂತೆ ಹೊಸ...

'ಸಮಾಜದ ವಿನ್ಯಾಸ ಬದಲಾದಂತೆ ಹೊಸ ಸಾಹಿತ್ಯದ ಸೃಷ್ಟಿ ಅಗತ್ಯ'

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಜನಾರ್ದನ ಭಟ್

ವಾರ್ತಾಭಾರತಿವಾರ್ತಾಭಾರತಿ13 Jan 2019 8:10 PM IST
share
ಸಮಾಜದ ವಿನ್ಯಾಸ ಬದಲಾದಂತೆ ಹೊಸ ಸಾಹಿತ್ಯದ ಸೃಷ್ಟಿ ಅಗತ್ಯ

ಬೆಳ್ಮಣ್, ಜ.13: ಸಮಾಜದ ವಿನ್ಯಾಸ ಬದಲಾದಂತೆ ಸಮಾಜದ ಸತ್ಯ ಮತ್ತು ಋತಗಳನ್ನು ಅರಿಯುವ ಮಾನದಂಡಗಳು ಬೇರೆಯಾಗುತ್ತ ಹೋಗುವುದ ರಿಂದ ಹೊಸ ಹೊಸ ಸಾಹಿತ್ಯದ ಸೃಷ್ಟಿ ಆಗಬೇಕಾಗುತ್ತದೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿರುವ ಸಾಹಿತಿ, ಲೇಖಕ, ಕವಿ ಡಾ.ಬಿ. ಜನಾರ್ದನ ಭಟ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕಾರ್ಕಳ ತಾಲೂಕಿನ ಮುಂಡ್ಕೂರು ದುರ್ಗಾಪರಮೇಶ್ವರೀ ದೇವಸ್ಥಾನದ ನಾನಾ ಪಾಟೇಕರ್ ಸಭಾಂಗಣದಲ್ಲಿ ಆಯೋಜಿಸಲಾದ ಎರಡು ದಿನಗಳ 13ನೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದ ಅಧ್ಯಕ್ಷ ಸ್ಥಾನದಿಂದ ಅವರು ಮಾತನಾಡುತಿದ್ದರು.

ಸಾಹಿತ್ಯ ಸಮಾಜದಲ್ಲಿ ಸದಾಚಾರ ಮತ್ತು ಜನರಲ್ಲಿ ಸದ್ಗುಣಗಳನ್ನು ನೆಲೆಗೊಳಿಸುವುದಕ್ಕಾಗಿ ಇರುವ ಭಾಷಾ ಮಾಧ್ಯಮವಾಗಿದೆ. ಸಾಹಿತ್ಯದಲ್ಲಿ ಆದರ್ಶ ಕಥನ ಮತ್ತು ವಾಸ್ತವ ಕಥನ ಎಂಬ ಎರಡು ಪ್ರಮುಖ ಮಾದರಿಗಳಿವೆ. ಒಂದು ಸಾಹಿತ್ಯ ಕೃತಿಯು ಸತ್ಯ ಮತ್ತು ಋತ ಎಂಬ ಆಯಾಮಗಳನ್ನು ಅರ್ಥ ಮಾಡಿಸಿದರೆ ಅದು ಶಾಶ್ವತವಾಗಿ ಉಳಿಯುತ್ತದೆ ಎಂದರು.

ಈಗ ಸೃಜನಶೀಲ ಸಾಹಿತ್ಯಕ್ಕಿಂತ ಸೃಜನೇತರ ಸಾಹಿತ್ಯವೇ ಹೆಚ್ಚಾಗಿದೆ. ಸಾಹಿತ್ಯಕ್ಕೆ ಹಿಂದೆ ಇದ್ದ ನಾಯಕ ಸ್ಥಾನ ಕಳೆದುಹೋಗಿದೆ. ಹಿಂದೆ ಸಮಾಜದ ಎಲ್ಲ ಆಗುಹೋಗುಗಳಿಗೂ ಸಾಹಿತಿಗಳೇ ಪ್ರತಿಕ್ರಿಯೆ ನೀಡುತ್ತಿದ್ದರು. ಈಗ ಸಾಹಿತ್ಯಕ್ಕೆ ಸಮಾಜದಲ್ಲಿ ಹಿಂದೆ ಇದ್ದ ಪ್ರಾಮುಖ್ಯ ಇಲ್ಲ ಎಂದು ಅವರು ತಿಳಿಸಿದರು.

ಸಾಹಿತ್ಯದ ಪ್ರಸಾರಕ್ಕೆ ಸಾಮಾಜಿಕ ಜಾಲತಾಣಗಳ ಸಾಧ್ಯತೆ ಅಪಾರ. ಆದರೆ ಇಲ್ಲಿ ಸಮನ್ವಯಕಾರರ ಕೊರತೆ ಇದೆ. ಮುಖ್ಯವಾಗಿ ಎಡಪಂಥ ಮತ್ತು ಬಲಪಂಥ ಎಂಬ ಎರಡು ಬಣಗಳನ್ನು ಇಲ್ಲಿ ಕಾಣಬಹುದು. ಮಧ್ಯಮ ಪಂಥ ಎಂಬುದು ಇಂದು ಅಗತ್ಯ ಇದೆ. ಆ ಮೂಲಕ ಸಮನ್ವಯಕ್ಕೆ ಕೆಲವರು ಪ್ರಯತ್ನಿಸಿದರೂ ಉಳಿದ ಎರಡು ಪಂಥಗಳು ಅದನ್ನು ಸಮನ್ವಯಕಾರನಂತೆ ಭಾವಿಸದೆ ವಿರೋಧಿಯೆಂದು ಭಾವಿಸುತ್ತದೆ ಎಂದು ಅವರು ಹೇಳಿದರು.

ಪತ್ರಿಕೆಗಳಲ್ಲಿ ಪುಸ್ತಕ ಸಂಸ್ಕೃತಿಗೆ ಅವಕಾಶ ಕಡಿಮೆಯಾಗಿದೆ. ಹಾಗಾಗಿ ಸಾಹಿತ್ಯಾಸಕ್ತರು ಜಾಲತಾಣಗಳ ಮೂಲಕ ಪುಸ್ತಕ ಸಂಸ್ಕೃತಿಯನ್ನು ಉಳಿಸಿ ಕೊಳ್ಳುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಕವಿತೆ ಎಂಬ ಪ್ರಕಾರ ತನ್ನ ಪ್ರಸ್ತುತತೆ ಕಳೆದುಕೊಳ್ಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಮತ್ತೆ ಜನಪ್ರಿಯತೆ ಗಳಿಸುತ್ತಿರುವುದು ಸಂತೋಷ ಸಂಗತಿ ಎಂದು ಅವರು ತಿಳಿಸಿದರು.

ಕೆಳದಿಯ ನಾಯಕರು, ಟಿಪ್ಪುಸುಲ್ತಾನ ಹಾಗೂ ಬ್ರಿಟಿಷರ ಆಳ್ವಿಕೆಯ ಪ್ರಾರಂಭದ ಘಟ್ಟದಲ್ಲಿ ರಾಜಕೀಯ ಅಸ್ಥಿರತೆಯ ಕಾರಣದಿಂದ ಇಲ್ಲಿ ಸಾಹಿತ್ಯ ಕಲೆಗಳಿಗೆ ಪ್ರೋತ್ಸಾಹ ಇರಲಿಲ್ಲ. ಮಿಷನರಿಗಳ ಪ್ರಯತ್ನದಿಂದಾಗಿ ಆಧುನಿಕ ಶಿಕ್ಷಣ ವ್ಯವಸ್ಥೆ ಪ್ರಾರಂಭವಾಗಿ ಅನುವಾದಗಳ, ಪತ್ರಿಕೆಗಳ ಮೂಲಕ ಹೊಸ ಸಾಹಿತ್ಯ ಪ್ರಕಾರಗಳಿಗೆ ಇಲ್ಲಿನ ಜನ ತೆರೆದುಕೊಂಡರು. 19ನೆ ಶತಮಾನದ ಕೊನೆಗೆ ಮತ್ತು 20ನೆ ಶತಮಾನದ ಪ್ರಾರಂಭದಲ್ಲಿ ಹೊಸಗನ್ನಡದ ಅರುಣೋದ ಯವಾಯಿತು ಎಂದರು.

ಪ್ರಾಚೀನ ಕಾಲದಿಂದಲೂ ಉಡುಪಿ ಜಿಲ್ಲೆ ವಿವಿಧ ಬಗೆಯ ಸಾಮರಸ್ಯಕ್ಕೆ ಹೆಸರಾಗಿದೆ. ಇದು ಇತಿಹಾಸ ಕಾಲದಲ್ಲಿಯೂ ಮತ, ಧರ್ಮಗಳ ಪರಂಪರೆ ಯಲ್ಲಿ ಮುಂದುವರಿದುಕೊಂಡು ಬಂದಿರುವುದನ್ನು ಕಾಣಬಹುದು. ಇಲ್ಲಿ ಭಾಷಾ ಸಾಮರಸ್ಯ ಕೂಡ ಇದೆ. ಕನ್ನಡ, ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆಗಳು ಇಲ್ಲಿನ ಪ್ರಧಾನ ಜನನುಡಿಗಳಾಗಿವೆ ಎಂದು ಅವರು ಹೇಳಿದರು.

ಮಹಾ-ಕಿರಿಯ ಸಮುದಾಯಗಳ ಮಧ್ಯೆ ಸಂಘರ್ಷ

20ನೆ ಶತಮಾನದಲ್ಲಿ ಶೋಷಕ ಪ್ರವೃತ್ತಿಯನ್ನು ಬೆಳೆಸಿಕೊಂಡ ಮಹಾ ಸಮುದಾಯ ಮತ್ತು ಹೊಸ ಸಾಧ್ಯತೆಗಳನ್ನು ಅನ್ವೇಷಿಸುತ್ತ ಹೊಸ ಸಂಬಂಧ ಗಳನ್ನು ಬೆಸೆಯುವ ಕಿರಿಯ ಸಮುದಾಯಗಳ ನಡುವಿನ ಸಂಘರ್ಷಗಳ ವಿವಿಧ ಸ್ವರೂಪಗಳನ್ನು ಆಧುನಿಕ ಸಾಹಿತ್ಯ ಕೃತಿಗಳು ದಾಖಲಿಸುತ್ತ ಬಂದಿವೆ ಎಂದು ಡಾ.ಬಿ.ಜನಾರ್ದನ ಭಟ್ ಹೇಳಿದರು.

ಭೂಹಿಡುವಳಿದಾರರು, ಉದ್ಯಮಿಗಳು, ಸಮುದಾಯಗಳ ಪಾರಂಪರಿಕ ಗುರಿಕಾರರು ಮತ್ತು ಆರಾಧನಾ ಸ್ಥಳಗಳ ಆಡಳಿತವರ್ಗದವರ ಮಹಾ ಸಮುದಾಯ ಶೋಷಕ ಪ್ರವೃತ್ತಿ ಹೊಂದಿತ್ತು. ಇದಕ್ಕೆ ಪ್ರತಿಯಾಗಿರುವ ಬಡವರು, ಶೋಷಿತರು ಮತ್ತು ನವವಿದ್ಯಾವಂತರ ಕಿರಿಯ ಸಮುದಾಯ ರೂಪುಗೊಂಡಿತ್ತು. ಇದರ ಪ್ರತಿನಿಧಿಗಳು ಪಾರಂಪರಿಕ ಶಕ್ತಿಯ ಕೇಂದ್ರಗಳ ಹಿಡಿತವನ್ನು ಪ್ರಶ್ನಿಸುತ್ತಾರೆ. ಅವುಗಳನ್ನು ದುರ್ಬಲ ಗೊಳಿಸುವುದರ ಮೂಲಕ ಶೋಷಣೆಯಿಲ್ಲದ ಸಮಾಜವೊಂದರ ನಿರ್ಮಾಣಕ್ಕೆ ಪ್ರಯತ್ನಿಸುತ್ತಾರೆ. ಈ ಕಿರಿಯ ಸಮುದಾಯದ ಪ್ರತಿನಿಧಿಗಳು ಜಾತಿ ಕಟ್ಟಳೆ ಯನ್ನು ಕೂಡ ಮೀರಿ ಒಂದು ಆದರ್ಶ ಸಮಾಜದ ಸ್ಥಾಪನೆಗೆ ಮುಂದಾಗುತ್ತಾರೆ. ಈ ಹಂತದಲ್ಲಿ ಕೆಲವು ಕೃತಿಗಳು ಆದರ್ಶವಾದಿ ನಿಲುವನ್ನು ತಳೆಯುತ್ತವೆ. ಇನ್ನು ಕೆಲವು ದುರಂತದಲ್ಲಿ ಕೊನೆಗೊಳ್ಳುತ್ತವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X