ನಿರುದ್ಯೋಗದಿಂದ ಯುವಜನತೆ ಮಾನಸಿಕ ಸ್ಥೈರ್ಯ ಕುಸಿತ: ಕೋಟ
ಎರಡು ದಿನಗಳ ಉಡುಪಿ ಉದ್ಯೋಗ ಮೇಳ ಉದ್ಘಾಟನೆ
ಉಡುಪಿ, ಜ.19: ಉದ್ಯೋಗ ಇಲ್ಲದ ಕಾರಣ ಸಮಾಜದಲ್ಲಿ ಯುವ ಸಮು ದಾಯದ ಮಾನಸಿಕ ಸ್ಥೈರ್ಯ ಕುಸಿಯುತ್ತಿದೆ. ಆದುದರಿಂದ ಯುವ ಸಮು ದಾಯಕ್ಕೆ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡುವುದು ಈ ನಮ್ಮ ವ್ಯವಸ್ಥೆಯ ಜವಾಬ್ದಾರಿಯಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸಂಚಲನ ಆಶ್ರಯದಲ್ಲಿ ಉನ್ನತಿ ಕ್ಯಾರಿಯರ್ ಅಕಾಡೆಮಿಯ ಪ್ರಾಯೋಜ ಕತ್ವದಲ್ಲಿ ಸ್ವಾಮಿ ವಿವೇಕಾನಂದರ 156ನೆ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿವಸ ಆಚರಣೆ ಅಂಗವಾಗಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿ ಕೊಳ್ಳಲಾಗಿರುವ ಎರಡು ದಿನಗಳ ಉಡುಪಿ ಉದ್ಯೋಗ ಮೇಳವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಉದ್ಯೋಗ ಸೃಷ್ಠಿಸುವುದು ಕ್ಲಿಷ್ಟಕರವಾಗಿದೆ. ಶಿಕ್ಷಣ, ಗ್ರಾಮೀಣಾಭಿವೃದ್ಧಿ ಹಾಗೂ ಕಂದಾಯ ಇಲಾಖೆಗಳಲ್ಲಿ ಶೇ.50ರಷ್ಟು ಹುದ್ದೆಗಳು ಖಾಲಿ ಇವೆ. ಆರ್ಥಿಕ ಹೊರೆ ತಪ್ಪಿಸಲು ಸರಕಾರ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳನ್ನು ನೇಮಕ ಮಾಡಿ ಕೊಳ್ಳುತ್ತಿವೆ. ಇದರಿಂದ ಸರಿಯಾದ ಉದ್ಯೋಗವೂ, ಸಂಬಳವೂ ಸರಿಯಾಗಿ ಸಿಗುತ್ತಿಲ್ಲ ಎಂದರು.
ಸಂಚಲನ ಅಧ್ಯಕ್ಷ ಪ್ರೇಮ್ ಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಉದ್ಯೋಗ ಮೇಳದಲ್ಲಿ ಪ್ರಥಮ ದಿನ 5000 ವಿದ್ಯಾರ್ಥಿಗಳು ಹಾಗೂ 100ಕ್ಕೂ ಅಧಿಕ ವಿವಿಧ ಕಂಪೆನಿಗಳು ಪಾಲ್ಗೊಂಡಿದ್ದಾರೆ. ಮತ್ತೆ 5000 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಮೂಲಕ ಒಟ್ಟು 8500 ಉದ್ಯೋಗಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾತನಾಡಿದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ವಹಿಸಿದ್ದರು. ಅಜ್ಜರಕಾಡು ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ್ ಶೆಟ್ಟಿ, ಬೆಂಗಳೂರು ಸೃಷ್ಟಿ ಸ್ಕಿಲ್ಸ್ನ ಆಡಳಿತ ನಿರ್ದೇಶಕಿ ಅಕ್ಷತಾ, ನಗರಸಭೆ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿವಿಯ ಹಿರಿಯ ಪ್ರಾದೇಶಿಕ ನಿರ್ದೇಶಕ ಡಾ.ಕೆ. ವೇಣುಗೋಪಾಲ್ ರೆಡ್ಡಿ, ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ ಮುಖ್ಯ ಅತಿಥಿಗಳಾಗಿದ್ದರು.
ವೇದಿಕೆಯಲ್ಲಿ ಮಹಿಳಾ ಕಾಲೇಜಿನ ಉಪನ್ಯಾಸಕರಾದ ಪ್ರೊ.ಶ್ರೀಧರ್ ಭಟ್, ರಾಮರಾಯ ಆಚಾರ್ಯ ಉಪಸ್ಥಿತರಿದ್ದರು. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ವಿಜೇ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕೃತಕ ನಿರುದ್ಯೋಗ ಸಮಸ್ಯೆ ಸೃಷ್ಠಿ: ಡಿಸಿ
ಸುಶಿಕ್ಷಿತ ಯುವ ಸಮುದಾಯದ ನಿರೀಕ್ಷೆಗೆ ತಕ್ಕಂತೆ ಉದ್ಯೋಗ ಒದಗಿಸು ವುದೇ ದೊಡ್ಡ ಸವಾಲಾಗಿದೆ. ಕೆಲವೊಂದು ಉದ್ಯೋಗಗಳು ಮಾತ್ರ ಘನತೆ, ಹೆಸರು ತಂದು ಕೊಡುತ್ತವೆ ಎಂಬ ಮನೋಭಾವ ಇಂದಿನ ಯುವಸಮು ದಾಯದಲ್ಲಿ ಬೆಳೆದಿದೆ. ಹಾಗಾಗಿ ನಾವೇ ಕೃತಕ ನಿರುದ್ಯೋಗ ಸಮಸ್ಯೆಯನ್ನು ಸೃಷ್ಟಿಸಿಕೊಂಡಿದ್ದೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು.
ಕೆಲವೊಂದು ಉದ್ಯೋಗಕ್ಕೆ ಜನರೇ ಸಿಗುತ್ತಿಲ್ಲ. ಕೃಷಿ ಬಗ್ಗೆ ಯುವ ಸಮು ದಾಯಕ್ಕೆ ಆಸಕ್ತಿಯೇ ಇಲ್ಲ. ಮಾಹಿತಿ ಕೊರತೆಯಿಂದ ಕೃಷಿಯಿಂದ ದೂರ ಸರಿ ಯುತ್ತಿದ್ದಾರೆ. ಆದರೆ ಕೃಷಿಯಲ್ಲಿ ಸರಿಯಾಗಿ ತೊಡಗಿಸಿಕೊಳ್ಳುವುದರಿಂದ ಮೂರು ಪಟ್ಟು ಆದಾಯವನ್ನು ಗಳಿಸಬಹುದಾಗಿದೆ. ನಾವು ಇತರರಿಗೆ ಉದ್ಯೋಗ ಕೊಡುವ ರೀತಿಯಲ್ಲಿ ಬೆಳೆಯಬೇಕು. ಅದಕ್ಕೆ ಇಚ್ಛಾಶಕ್ತಿ ಮುಖ್ಯ. ಇದರಿಂದ ದೇಶದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.