ಪೌರಕಾರ್ಮಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ, ಜ.20: ಭಾರತೀಯ ಜನತಾ ಪಕ್ಷ ಉಡುಪಿ ನಗರ ಹಾಗೂ ಅಂಬಲಪಾಡಿ ಹೈಟೆಕ್ ಮೆಡಿಕೇರ್ ಆಸ್ಪತ್ರೆಯ ವತಿಯಿಂದ ಪೌರ ಕಾರ್ಮಿಕ ರಿಗೆ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಹನುಮಂತ ನಗರ ಕುದ್ಮಲ್ ರಂಗರಾವ್ ನಗರದಲ್ಲಿ ರವಿವಾರ ಆಯೋಜಿಸಲಾಗಿತ್ತು.
ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ ದರು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಪ್ರಭಾಕರ್ ಪೂಜಾರಿ, ಬಿಜೆಪಿ ನಗರ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ದಾವೂದ್ ಅಬೂಬಕ್ಕರ್, ನಗರ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಹಾಗೂ ಉಪೇಂದ್ರ ನಾಯಕ್, ಪ್ರಮುಖರಾದ ರಾಘವೇಂದ್ರ ಕಿಣಿ, ಪ್ರದೀಪ್ ರಾವ್, ಚಂದ್ರಶೇಖರ ಪ್ರಭು ಉಪಸ್ಥಿತರಿದ್ದರು. ಹೈಟೆಕ್ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಆರೋಗ್ಯ ತಪಾ ಣಾ ಕಾರ್ಯವನ್ನು ನಡೆಸಿಕೊಟ್ಟರು.
Next Story