ಕಾರು ಢಿಕ್ಕಿ : ಬೈಕ್ ಸವಾರ ಮೃತ್ಯು
ಮಂಜೇಶ್ವರ, ಜ. 24: ರಾ. ಹೆದ್ದಾರಿಯ ಕುಕ್ಕಾರು ಎಂಬಲ್ಲಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ಮೊಗ್ರಾಲ್ ಪೇರಾಲ್ ಚಾಯಿವಳಪ್ ನಿವಾಸಿ ಮಮ್ಮು ಅವರ ಪುತ್ರ ಅಬೂಬಕ್ಕರ್ ಸಿದ್ದೀಕ್ (36) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಬೈಕ್ನಲ್ಲಿ ಉಪ್ಪಳಕ್ಕೆ ಹೋಗುತ್ತಿದ್ದಾಗ ಬೈಕ್ ಗೆ ಕಾರು ಢಿಕ್ಕಿ ಹೊಡೆದಿದ್ದು ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
Next Story