ಬೈಕ್ ಸ್ಕಿಡ್: ಸವಾರ ಮೃತ್ಯು
ಬೈಂದೂರು, ಫೆ.1: ಕಿರಿಮಂಜೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.31ರಂದು ಸಂಜೆ 5.40ರ ಸುಮಾರಿಗೆ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಮೂಲತಃ ಕೇರಳ ಹಾಗೂ ಪ್ರಸ್ತುತ ಕೆರ್ಗಾಲ್ ಗ್ರಾಮದ ನಾಯ್ಕನಕಟ್ಟೆ ನಿವಾಸಿ ಪ್ರಸನ್ನ (53) ಎಂದು ಗುರುತಿಸಲಾಗಿದೆ. ಇವರು ಸಾಜಯ್ ಎಂಬವರೊಂದಿಗೆ ಬೈಕಿನಲ್ಲಿ ನಾವುಂದ ಕಡೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿತ್ತೆನ್ನಲಾಗಿದೆ. ಇದರಿಂದ ಇಬ್ಬರು ಸವಾರರು ಕೂಡ ತೀವ್ರವಾಗಿ ಗಾಯಗೊಂಡಿದ್ದರು ಎನ್ನಲಾಗಿದೆ.
ಇವರಲ್ಲಿ ಗಂಭೀರವಾಗಿ ಗಾಯಗೊಂಡ ಪ್ರಸನ್ನ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.
Next Story