ವಿಟ್ಲ : ಸಮರ್ಪಣ್ ಟ್ರಸ್ಟ್ ಬೆಂಗಳೂರು ವತಿಯಿಂದ ವಿಜ್ಞಾನ ಪರಿಕರಗಳ ವಿತರಣೆ
ವಿಟ್ಲ, ಫೆ. 2: ಸಮರ್ಪಣ್ ಟ್ರಸ್ಟ್ ಇನ್ಪೋಸಿಸ್ ಬೆಂಗಳೂರು ವತಿಯಿಂದ ಬಂಟ್ವಾಳ ತಾಲೂಕಿನ ಆಯ್ದ 22 ಸರಕಾರಿ ಶಾಲೆ ಗಳಿಗೆ ಉಚಿತ ವಿಜ್ಞಾನ ಶೈಕ್ಷಣಿಕ ಪರಿಕರಗಳ ವಿತರಣಾ ಸಮಾರಂಭ ಶನಿವಾರ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಸಮರ್ಪಣ್ ಟ್ರಸ್ಟ್ ನ ರಿತೇಶ್ ಬೆಂಗಳೂರು ಶಿಕ್ಷಣಾಧಿಕಾರಿ ಶಿವಪ್ರಕಾಶ್ ಅವರಿಗೆ ಕಿಟ್ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಈಗಾಗಲೇ ರಾಜ್ಯದ 22 ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಇದರ ಬಳಕೆ ಮತ್ತು ಫಲಿತಾಂಶವನ್ನು ಅನುಸರಿಸಿ ಮತ್ತಷ್ಟು ಶೈಕ್ಷಣಿಕ ಪ್ರಗತಿಗೆ ಪೂರಕವಾದ ಯೋಜನೆಗಳನ್ನು ಉದ್ಧೇಶಿಸಲಾಗಿದೆ. ಅಲ್ಲದೆ ಟ್ರಸ್ಟ್ ಉದ್ಯೋಗ, ಕೌಶಲ್ಯ ಅಭಿವೃದ್ಧಿ ಯೋಜನೆ, ನನ್ನ ಕಣ್ಣು ಯೋಜನೆ ಮೊದಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ನ್ನು ವಹಿಸಿ, ಶಾಲೆಗಳಿಗೆ ಕಿಟ್ ವಿತರಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ವಿಜ್ಞಾನದ ಬೋಧನೆ ಪರಿಣಾಮಕಾರಿಯಾಗಿ ಯಾವ ರೀತಿಯಲ್ಲಿ ಮಾಡಬಹುದು ಎಂಬುದನ್ನು ಅರಿತುಕೊಂಡು ಉತ್ತಮವಾದ ಕಾರ್ಯ ಕ್ರಮವನ್ನು ಇನ್ಫೋಸಿಸ್ ಸಮರ್ಪಣ್ ಟ್ರಸ್ಟ್ ಮಾಡಿದೆ.
ವಿಜ್ಞಾನ ಇರುವುದು ಜೀವನದ ಗುಣಮಟ್ಟವನ್ನು ಹೆಚ್ಚಿಸಲು , ಮಕ್ಕಳಿಗೆ ಶಿಕ್ಷಣವನ್ನು ಹೇರುವ ಬದಲು ಇಂತಹ ಪರಿಕರಗಳನ್ನು ಬಳಸಿಕೊಂಡು ಪಾಠ ಮಾಡುವುದು ಜೀವನ ಪರ್ಯಂತ ನೆನಪು ಉಳಿಯುವಂತೆ ಮಾಡುತ್ತದೆ ಎಂದರು. ಬೋಧನಾ ವಿಧಾನ ಬದಲಿಸಬೇಕು, ಪುಸ್ತಕದ ಜೊತೆ ವಸ್ತುಗಳ ಬಳಕೆ ಮಾಡುವ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಕೆಲಸಗಳು ಆಗಬೇಕಾಗಿದೆ.
ವಿಜ್ಞಾನ ಬೋಧನೆ ಸರಳವಾಗಿ ಮಕ್ಕಳಿಗೆ ಅರ್ಥವಾಗುವ ರೀತಿಯಲ್ಲಿ ಬೋಧನೆ ಮಾಡಲು ಟ್ರಸ್ಟ್ ನೀಡಿದ ಪರಿಕರಗಳು ಫಲಿತಾಂಶಕ್ಕೆ ಪರಿಣಾಮ ಬೀಳಬಹುದು ಎಂದರು.
ಶೈಕ್ಷಣಿಕವಾಗಿ ಸಾಮಾಜಿಕ ಕಳಕಳಿಯಿಂದ ನೀಡಿದ ಪರಿಕರಗಳನ್ನು ಶಿಕ್ಷಕರು ಪ್ರಮಾಣಿಕವಾಗಿ ಬಳಕೆ ಮಾಡಲು ತಿಳಿಸಿದರು.
ಇದರಿಂದ ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಬಂಟ್ವಾಳ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಪ್ರಾಂಶುಪಾಲರ ಮತ್ತು ಮುಖ್ಯ ಶಿಕ್ಷಕರ ಸಂಘದ ಅದ್ಯಕ್ಷ ರಮಾನಂದ ನೂಜಿಪ್ಪಾಡಿ, ಬಂಟ್ವಾಳ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಜೋಯೆಲ್ ಲೋಬೊ, ಸಮರ್ಪಣ್ ಟ್ರಸ್ಟ್ ನ ಪ್ರಮುಖರಾದ ಶೇಖರ್ , ಕೋಮಲ, ಶ್ವೇತಾ, ಡಿ.ಸಿ.ಸಿ.ಬ್ಯಾಂಕ್ ಸಿಬ್ಬಂದಿ, ಕಾರ್ಯಕ್ರಮ ಸಂಯೋಜಕ ಪದ್ಮನಾಭ ಶೆಟ್ಟಿ ವಾಮದಪದವು, ಪಂಜಿಕಲ್ಲು ಶಾಲಾ ಶಿಕ್ಷಕ ಇಮ್ತಿಯಾಝ್ ಮೊದಲಾದವರಿದ್ದರು.
ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ರಮೇಶ್ ನಾಯಕ್ ರಾಯಿ ಸ್ವಾಗತಿಸಿದರು. ಸಿ.ಇ.ಒ ಸುಶೀಲಾ ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕಿಟ್ ಉಪಯೋಗದ ಕುರಿತು ಶಿಕ್ಷಕರಿಗೆ ತರಬೇತಿ ನಡೆಯಿತು.