ಹಿರಿಯ ವಿದ್ಯುತ್ ಗುತ್ತಿಗೆದಾರರಿಗೆ ಸನ್ಮಾನ
ಕಾಪು, ಫೆ.5: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಉಡುಪಿ ಜಿಲ್ಲೆ ಇದರ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಕಾಪು ಉಪ ಸಮಿತಿಯ ಅಧ್ಯಕ್ಷ ಅನ್ವರ್ ಅಲಿ ಕಾಪು ಅವರನ್ನು ಇತ್ತೀಚೆಗೆ ಸನ್ಮಾನಿಸಲಾಯಿತು.
ರಾಜ್ಯದ ಕೇಂದ್ರ ಸಮಿತಿ ಅಧ್ಯಕ್ಷ ಎಸ್.ಎಂ.ಕೃಷ್ಣ, ಪ್ರಧಾನ ಕಾರ್ಯದರ್ಶಿ ಜಿ.ರುದ್ರೇಶ್, ಉಪಾಧ್ಯಕ್ಷ ಪುರುಷೋತ್ತಮ, ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ಮೆಸ್ಕಾಂ ಪ್ರತಿನಿಧಿ ಲಕ್ಷ್ಮೀನಾರಾಯಣ, ಉಡುಪಿ ಜಿಲ್ಲಾಧ್ಯಕ್ಷ ನಾಗರಾಜ್ ರಾವ್, ಉಪಾಧ್ಯಕ್ಷ ಶ್ರೀಕಾಂತ್ ಶೆಣೈ, ಪ್ರಧಾನ ಕಾರ್ಯದರ್ಶಿ ಎ.ಕೆ.ಆಳ್ವ, ಜೊತೆ ಕಾರ್ಯದರ್ಶಿ ರಮಾನಂದ ಪೂಜಾರಿ, ಕೋಶಾಧಿಕಾರಿ ರಾಘವೇಂದ್ರ ರಾವ್, ಕ್ರೀಡಾ ರಾಜ್ಯ ಕಾರ್ಯದರ್ಶಿ ರಿಚಾರ್ಡ್ ಮಿರಾಂದ, ಪ್ರಚಾರ ಸಮಿತಿಯ ಅಧ್ಯಕ್ಷ ಉದಯ ಕುಮಾರ್, ಕೇಂದ್ರ ಸಲಹಾ ಸಮಿತಿ ಸದಸ್ಯ ರೋಶನ್, ಪ್ರಭಾಕರ್ ಉಪಸ್ಥಿತರಿದ್ದರು.
ಸನ್ಮಾನ ಪತ್ರವನ್ನು ಕಾಪು ಸಮಿತಿಯ ಕಾರ್ಯದರ್ಶಿ ದೇವರಾಜ್ ತೊಟ್ಟಂ ವಾಚಿಸಿದರು. ದಿನೇಶ್ ಕಡ್ತಳ ಕಾರ್ಯಕ್ರಮ ನಿರೂಪಿಸಿದರು.
Next Story