ಮೀನುಗಾರರ ಪತ್ತೆಗೆ ಕೇಂದ್ರ ಗೃಹ ಇಲಾಖೆ ಸೂಚನೆ: ರಘುಪತಿ ಭಟ್
ಉಡುಪಿ, ಫೆ.11: ಸುವರ್ಣ ತ್ರಿಭುಜ ಬೋಟು ಸಹಿತ ನಾಪತ್ತೆಯಾದ ಎಲ್ಲ ಮೀನುಗಾರರನ್ನು ಪತ್ತೆ ಹಚ್ಚುವಂತೆ ಮಾಡಿರುವ ಮನವಿಗೆ ಸ್ಪಂದಿಸಿರುವ ಕೇಂದ್ರ ಗೃಹ ಸಚಿವಾಲಯವು ತನ್ನ ಅಧೀನದಲ್ಲಿರುವ ಎಲ್ಲಾ ಇಲಾಖೆಗಳಿಗೆ ಪತ್ತೆ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಅಲ್ಲದೆ ಕರ್ನಾಟಕದ ನೆರೆಯ ಗೋವಾ, ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಿಗೂ ಕೂಡ ಈ ರಕ್ಷಣಾ ಕಾರ್ಯದಲ್ಲಿ ನೆರವಾಗುವಂತೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ. ಆದರೂ ನಾಪತ್ತೆಯಾದ ಮೀನುಗಾರರು ಸುರಕ್ಷಿತವಾಗಿ ವಾಪಾಸ್ಸು ಬರುವಂತೆ ಪ್ರಾರ್ಥಿಸಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story