ವಿಜ್ಞಾನ ದಿನಾಚರಣೆಗಾಗಿ ಲೇಖನ ಸ್ಪರ್ಧೆ
ಉಡುಪಿ, ಫೆ.11: ನೊಬೆಲ್ ಪ್ರಶಸ್ತಿ ವಿಜೇತ ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ.ವಿ.ರಾಮನ್ರವರ ಪ್ರತಿಷ್ಠಿತ ಅನ್ವೇಷಣೆ ರಾಮನ್ ಪರಿಣಾಮವನ್ನು ಜಗತ್ತಿಗೆ ಘೋಷಿಸಿದ ದಿನವಾದ ಫೆ.28ರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ವಿಜ್ಞಾನಾಸಕ್ತರಿಗೆ ಜನತೆಗಾಗಿ ವಿಜ್ಞಾನ, ವಿಜ್ಞಾನಕ್ಕಾಗಿ ಜನತೆ ಎಂಬ ವಿಷಯದ ಕುರಿತು ಲೇಖನ ಸ್ಪರ್ಧೆ ಆಯೋಜಿಸಲಾಗಿದೆ.
ಆಸಕ್ತರು 1000 ಪದಗಳು ಮೀರದಂತೆ ಕಡ್ಡಾಯವಾಗಿ ಕನ್ನಡದಲ್ಲಿ ಲೇಖನ ಬರೆದು ಕಳುಹಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವವರು ಲೇಖನದೊಂದಿಗೆ ತಮ್ಮ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ವಿವರಗಳನ್ನು ನಮೂದಿಸಬೇಕು. ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಭಾಗವಹಿಸಿದ ಎಲ್ಲರಿಗೂ ಅಭಿನಂದಾ ಪತ್ರವನ್ನು ನೀಡಲಾಗುವುದು.
ಲೇಖನಗಳನ್ನು ಫೆ.23 ರ ಒಳಗೆ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಭವನ, ಬೆಂಗಳೂರು ವಿಳಾಸಕ್ಕೆ ಅಂಚೆ ಮೂಲಕ ಅಥವಾ ಇ-ಮೇಲ್ krvp.info@gmail.com ಗೆ ಕಳುಹಿಸಬಹು ದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ: 080-26718939, ಮೊ. 9483549159ನ್ನು ಸಂಪರ್ಕಿಸುವಂತೆ ಪರಿಷತ್ನ ಗೌರವ ಕಾರ್ಯದರ್ಶಿ ಗಿರೀಶ್ ಕಡ್ಲೇವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.