ಟ್ಯಾಂಕರ್-ಕಾರು ಮುಖಾಮುಖಿ ಢಿಕ್ಕಿ: ನಾಲ್ವರು ಸ್ಥಳದಲ್ಲೇ ಮೃತ್ಯು
ಓರ್ವ ಗಂಭೀರ
ಕಾರವಾರ, ಫೆ. 13: ಟ್ಯಾಂಕರ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಅಂಕೋಲಾದ ಹಾರವಾಡ ಬಳಿ ಇದೀಗ ನಡೆದಿದೆ.
ಗಾಯಾಳುವನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಬೆಂಗಳೂರು ಹಾಗೂ ಓರಿಸ್ಸಾ ಮೂಲದವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಂಕೋಲಾ ಠಾಣೆ ಪೊಲೀಸ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.