ಎಲ್ಐಸಿ ನಿವೃತ್ತ ಅಭಿವೃದ್ಧಿ ಅಧಿಕಾರಿ ಕೃಷ್ಣದಾಸ್ ನಿಧನ
ಮಲ್ಪೆ, ಫೆ.14: ನ್ಯಾಶನಲ್ ಇನ್ಸೂರೆನ್ಸ್ ಕಂಪೆನಿಯ ನಿವೃತ್ತ ಅಭಿವೃದ್ಧಿ ಅಧಿಕಾರಿ, ಮಲ್ಪೆ ಐಸ್ಪ್ಲಾಂಟ್ನ ಮಾಲಕ ಕೆ.ಕೃಷ್ಣದಾಸ್(60) ಫೆ.13ರಂದು ಅಸೌಖ್ಯದಿಂದ ನಿಧನರಾದರು.
ಸಮಾಜ ಸೇವಕರಾಗಿದ್ದ ಅವರು ಕೊಡುಗೈ ದಾನಿಯಾಗಿದ್ದರು. ಮಲ್ಪೆ ಫಿಶರೀಸ್ ಶಾಲಾ ಹಳೆ ವಿದ್ಯಾರ್ಥಿ ಸಂಘದ ಸುವರ್ಣ ಮಹೋತ್ಸವ ಸಮಿತಿಯ ಉಪಾಧ್ಯಕ್ಷರಾಗಿ, ಮಲ್ಪೆ ಅಟೋರಿಕ್ಷಾ ಚಾಲಕರ ಸಂಘದ ಗೌರವಾಧ್ಯಕ್ಷರಾಗಿ ಅನೇಕ ಸಂಘಟನೆಯಲ್ಲಿ ಸೇವೆ ಸಲ್ಲಿಸಿದ್ದರು. ಮೃತರು ತಾಯಿ, ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.
Next Story