ಜಾನುವಾರು ಅಕ್ರಮ ವಧೆ: ಇಬ್ಬರ ಬಂಧನ
ಬಂಟ್ವಾಳ, ಫೆ. 14: ಜಾನುವಾರು ಅಕ್ರಮ ವಧೆ ಆರೋಪದ ಮೇರೆಗೆ ಇಬ್ಬರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕೋಡಿಂಬಾಳ ಗ್ರಾಮದ ನಿವಾಸಿಗಳಾದ ಆಸೀಫ್ (31) ಹಾಗೂ ಆಸಿರ್ ( 25) ಬಂಧಿತರು ಎಂದು ತಿಳಿದುಬಂದಿದೆ.
ಸಜೀಪನಡು ಗ್ರಾಮದ ಗೋಳಿಪಡ್ಪು ಎಂಬಲ್ಲಿ ಜಾನುವಾರನ್ನು ಅಕ್ರಮವಾಗಿ ವಧೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಪೊಲೀಸರು ಇಂದು ಮಧ್ಯಾಹ್ನ ವೇಳೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಓರ್ವ ಪರಾರಿಯಾಗಿದ್ದು, ಜಾನುವಾರು, ಕಡಿದುಮಾಂಸ ಮಾಡಲು ಉಪಯೋಗಿಸಿದ ಸಲಕರಣೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story