ಗಂಗೊಳ್ಳಿ ಉರ್ದು ಶಾಲೆಯಲ್ಲಿ ಶ್ರದ್ಧಾಂಜಲಿ
ಉಡುಪಿ, ಫೆ.15: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೂರದಲ್ಲಿ ಭಯೋತ್ಪಾದಕರ ಆತ್ಮಾಹುತಿ ದಾಳಿಯಲ್ಲಿ ವೀರ ಮರಣವನ್ನಪ್ಪಿದ ದೇಶದ ಸೈನಿಕರ ಆತ್ಮಕ್ಕೆ ಶಾಂತಿ ಕೋರಿ ಗಂಗೊಳ್ಳಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ(ಬೋರ್ಡ್ ಸ್ಕೂಲ್)ಯಲ್ಲಿ ಶುಕ್ರವಾರ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.
ಶಾಲಾರಂಭಕ್ಕೆ ಮುನ್ನ ಶಿಕ್ಷಕಿ ಹೇಮಾವತಿ ನಿನ್ನೆ ನಡೆದ ಘಟನೆಯ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ತದನಂತರ ಅಗಲಿದ ಯೋಧರ ಆತ್ಮಕ್ಕೆ ಚಿರಶಾಂತಿ ಕೋರಿ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿಯರಾದ ಶಕೀಲಾ ತಬಸ್ಸುಮ್, ರಾಗಿಣಿ ಹಾಗೂ ಭಾರತಿ ಕಲ್ಕೂರ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಶಹಾಬುದ್ದಿನ್ ಅಉಫ್ ಉಪಸ್ಥಿತರಿದ್ದರು.
Next Story