ಹುತಾತ್ಮ ಸ್ಮಾರಕದಲ್ಲಿ ವಿಎಚ್ಪಿಯಿಂದ ಶ್ರದ್ಧಾಂಜಲಿ
ಉಡುಪಿ, ಫೆ.15: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಹುತಾತ್ಮರಾದ ಕೇಂದ್ರೀಯ ಮೀಸಲು ಪಡೆಯ ವೀರ ಯೋಧರಿಗೆ ಅಜ್ಜರ ಕಾಡು ಹುತಾತ್ಮ ಸೈನಿಕರ ಯುದ್ಧ ಸ್ಮಾರಕದಲ್ಲಿ ವಿಶ್ವ ಹಿಂದು ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಯೋಧ ಗಣೇಶ್, ಅವಿಭಜಿತ ದ.ಕ. ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ವಿಎಚ್ಪಿ ಜಿಲ್ಲಾ ಕಾರ್ಯದರ್ಶಿ ಪ್ರಮೋದ್ ಶೆಟ್ಟಿ ಮಂದಾರ್ತಿ, ನಗರಾಧ್ಯಕ್ಷ ಸಂತೋಷ್ ಬೊಳ್ಜೆ, ತಾಪಂ ಅಧ್ಯಕ್ಷ ನಳಿನಿ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತ ರಿದ್ದರು.
Next Story