ಯೋಧರ ಹತ್ಯೆ: ಉಡುಪಿ ಕೆಥೊಲಿಕ್ ಸಭಾ ಖಂಡನೆ
ಉಡುಪಿ, ಫೆ.15: ಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಕೆಥೊಲಿಕ್ ಸಭಾ ಉಡುಪಿ ಪ್ರದೇಶ ತೀವ್ರ ವಾಗಿ ಖಂಡಿಸಿದೆ.
ಪಾಕಿಸ್ತಾನದ ರಕ್ತದಾಹಕ್ಕೆ ನಮ್ಮ ಯೋಧರು ಬಲಿಯಾಗಿದ್ದು ನಮ್ಮ ದೇಶಕ್ಕೆ ತುಂಬಲಾರದ ನಷ್ಟ. ಈ ಘೋರ ಕೃತ್ಯಕ್ಕೆ ಪ್ರತೀಕಾರ ಆಗಲೇಬೇಕು. ನಮ್ಮ ಯೋಧರ ತ್ಯಾಗ ವ್ಯರ್ಥ ಆಗಬಾರದು. ಸೈನಿಕರ ಬಲಿದಾನಕ್ಕೆ ಪ್ರತೀಕಾರ ನೀಡುವ ಕೆಲಸವನ್ನು ಕೇಂದ್ರ ಸರಕಾರ ಮಾಡಬೇಕು ಎಂದು ಕೆಥೊಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story