ತೆಂಕನಿಡಿಯೂರು: ಪ್ರೊ ಕಬಡ್ಡಿ ಪಂದ್ಯಾಟ ಉದ್ಘಾಟನೆ
ಉಡುಪಿ, ಫೆ.16: ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದೊಂದಿಗೆ ಅಂತರ್ ರಾಜ್ಯ ಮಟ್ಟದ ಪ್ರೊಕಬಡ್ಡಿಯು ಇತ್ತೀಚೆಗೆ ತೆಂಕನಿಡಿಯೂರು ಕಾಲೇಜು ಆವರಣದಲ್ಲಿ ಜರಗಿತು.
ಪಂದ್ಯಾಟವನ್ನು ಉಡುಪಿ ಶಾಸಕ ಕೆ. ರಘುಪತಿ ಟ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕ್ಲಬ್ನ ಗೌರವಾಧ್ಯಕ್ಷ ಗಿರೀಶ್ ಶೆಟ್ಟಿ ತೆಳ್ಳಾರು ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದ ಸುಮಾರು 12 ಮಂದಿಯನ್ನು ಗೌರವಿಸಲಾಯಿತು.
ಬೆಂಗಾಲ್ ವಾರಿಯರ್ಸ್ ತರಬೇತುದಾರ ಜಗದೀಶ್ ಕುಂಬ್ಳೆ, ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಶಿಯೇಶನ್ ಅಧ್ಯಕ್ಷ ರಾಜೇಂದ್ರ ಸುವರ್ಣ, ಉದ್ಯಮಿಗಳಾದ ಹರಿಯಪ್ಪಕೋಟ್ಯಾನ್, ಆನಂದ ಸುವರ್ಣ, ಮೆಟ್ರೈಸ್ ಗ್ರೂಪ್ನ ಪ್ರಸಾದ್ ಎಸ್.ರಾವ್, ಉದಯ ಶೆಟ್ಟಿ ಮುನಿಯಾಲು, ಮಂಗ ಳೂರು ವಿವಿ ಮಾಜಿ ಕುಲಪತಿಗಳಾದ ಡಾ.ಕಿಶೋರ್ ಕುಮಾರ್ ಸಿ.ಕೆ., ದಯಾನಂದ ಕುಂದರ್, ಶರತ್ ಮಣಿಪಾಲ, ನಿಟ್ಟೂರು ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸಂತೋಷ್ ಕರ್ನೇಲಿಯೋ, ಪಿಡಬ್ಲ್ಯೂಡಿ ಗುತ್ತಿಗೆದಾರ ಸುರೇಶ್ ಶೆಟ್ಟಿ ಬಡಾನಿಡಿಯೂರು, ಅರಣ್ಯ ಇಲಾಖೆಯ ಸುನೀಶ್ ಬಾಬು, ಕಾಲೇಜು ಶಿಕ್ಷಣ ಇಲಾಖೆಯ ಮಾಜಿ ಜಂಟಿ ನಿರ್ದೇಶಕ ಪ್ರೊ.ಮಹೇಶ್ ರಾವ್, ಯುವಜನ ಸಬಲೀಕರಣ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ತೆಂಕನಿಡಿಯೂರು ಕಾಲೇಜು ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್. ಹೆಗ್ಡೆ, ಆಂಗ್ಲಬಾಷಾ ವಿಭಾಗ ಮುಖ್ಯಸ್ಥ ಪ್ರೊ.ಪ್ರಸಾದ್ ರಾವ್ ಎಂ., ದಕ್ಷಿಣ ಕನ್ನಡ ಮೀನು ಮಾರಾಟ ಪೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣಾ, ನಗರಸಭಾ ಸದಸ್ಯ ವಿಜಯ್ ಕೊಡವೂರು, ಬಡಾನಿಡಿಯೂರು ಗ್ರಾಪಂ ಅಧ್ಯಕ್ಷ ಉಮೇಶ್ ಪೂಜಾರಿ, ಜಿಲ್ಲಾ ಪಂಚಾ ಯತ್ ಸದಸ್ಯ ಜನಾರ್ದನ ತೋನ್ಸೆ, ಗ್ರಾಪಂ ಮಾಜಿ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉದ್ಯಮಿ ಜಗನ್ನಾಥ ಕಡೆಕಾರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಿರ್ಮಿಸಲಾಗಿರುವ ಒಳಾಂಗಣ ಕ್ರೀಡಾಂಗಣವನ್ನು ಜಿಪಂ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಿದರು. ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ ಸಂಚಾಲಕ ರಾಮಚಂದ್ರ ಪಾಟ್ಕರ್ ಸ್ವಾಗತಿಸಿದರು, ದಯಾನಂದ ಕಾರ್ಯಕ್ರಮ ನಿರೂಪಿಸಿ ದರು. ಕ್ಲಬ್ ಅಧ್ಯಕ್ಷ ಸುಶಾನ್ ಶೆಟ್ಟಿ ವಂದಿಸಿದರು.