ಫೆ.18: ರಾಜ್ಯಮಟ್ಟದ ತುಳು ಪರ್ಬ
ಮಂಗಳೂರು, ಫೆ.16: ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ವತಿಯಿಂದ ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತತೆ) ಮತ್ತು ಕಾಲೇಜಿನ ತುಳುಕೂಟದ ಸಹಕಾರದೊಂದಿಗೆ ರಾಜ್ಯಮಟ್ಟದ ತುಳು ಪರ್ಬ ಕಾರ್ಯಕ್ರಮವು ಫೆ.18ರಂದು ಕಾಲೇಜಿನ ಎಲ್ಸಿಆರ್ಐ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ 10ಕ್ಕೆ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಎ.ಸಿ.ಭಂಡಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ರೆ.ಫಾ. ಡೈನೀಶೀಯಸ್ ವಾಸ್ ಎಸ್.ಜೆ. ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ತುಳು ಸಿನೆಮಾ ರಂಗಭೂಮಿ ಕಲಾವಿದ ಬೋಜರಾಜ್ ವಾಮಂಜೂರು, ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಹಾಗೂ ಡ್ರಾಮಾ ಜೂನಿಯರ್ಸ್ ವಿನ್ನರ್ ಬಾಲನಟಿ ಚಿತ್ರಾಲಿ ಭಾಗವಹಿಸುವರು.
ಅಪರಾಹ್ನ 4:30ಕ್ಕೆ ಜರುಗಲಿರುವ ಸಮಾರೋಪ ಸಮಾರಂಭದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಪ್ರವೀಣ್ ಮಾರ್ಟಿಸ್ ಅಧ್ಯಕ್ಷತೆ ವಹಿಸಲಿದ್ದು, ಉಪನ್ಯಾಸಕ ಡಾ. ಗಣೇಶ್ ಅಮೀನ್ ಸಂಕಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಪ್ರಕಟನೆ ತಿಳಿಸಿದೆ.
Next Story