ಕಾಸರಗೋಡು: ಮಾರಕಾಸ್ತ್ರದಿಂದ ಕೊಚ್ಚಿ ಯುವ ಕಾಂಗ್ರೆಸ್ ಕಾರ್ಯಕರ್ತನ ಕೊಲೆ
ಕಾಸರಗೋಡು, ಫೆ. 17: ಯುವ ಕಾಂಗ್ರೆಸ್ ಕಾರ್ಯಕರ್ತನೋರ್ವನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದ ಘಟನೆ ರವಿವಾರ ರಾತ್ರಿ ಪೆರಿಯದಲ್ಲಿ ನಡೆದಿದೆ.
ಯುವ ಕಾಂಗ್ರೆಸ್ ಕಾರ್ಯಕರ್ತ ಕೃಪೇಶ್ (24) ಕೊಲೆಗೀಡಾದವರು ಎಂದು ಗುರುತಿಸಲಾಗಿದೆ.
ಜೊತೆಗಿದ್ದ ಕಾಂಗ್ರೆಸ್ ಕಾರ್ಯಕರ್ತ ಶರತ್ ಲಾಲ್ ಗಂಭೀರ ಗಾಯಗೊಂಡಿದ್ದು, ಆತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯ ಖಂಡಿಸಿ ಕಾಸರಗೋಡು ಜಿಲ್ಲೆಯಲ್ಲಿ ಹರತಾಳಕ್ಕೆ ಯುಡಿಎಫ್ ಕರೆ ನೀಡಿದೆ.
Next Story