ಎಸ್ಸೆಸ್ಸೆಫ್ ಪಾಣೆಮಂಗಳೂರು ಸೆಕ್ಟರ್ ವತಿಯಿಂದ ರಕ್ತದಾನ ಶಿಬಿರ
ಬಂಟ್ವಾಳ,ಫೆ.18: ಎಸ್ಸೆಸ್ಸೆಫ್ ಪಾಣೆಮಂಗಳೂರು ಸೆಕ್ಟರ್ ವತಿಯಿಂದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಕಂಕನಾಡಿ ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವು ಕೊಳಕೆ ಜುಮಾ ಮಸ್ಜಿದ್ ಸಭಾಂಗಣದಲ್ಲಿ ರವಿವಾರ ನಡೆಯಿತು.
ಬದ್ರುದ್ದೀನ್ ಅಹ್ಸನಿ ಕೊಳಕೆ ಪ್ರಾರ್ಥಿಸಿದರು. ಎಸ್ಸೆಸ್ಸೆಫ್ ಪಾಣೆಮಂಗಳೂರು ಸೆಕ್ಟರ್ ಅಧ್ಯಕ್ಷ ಉಸ್ಮಾನ್ ಸಖಾಫಿ ಸಜಿಪ ಅಧ್ಯಕ್ಷತೆ ವಹಿಸಿದ್ದರು. ಕೊಳಕೆ ಜುಮಾ ಮಸ್ಜಿದ್ ಖತೀಬ್ ಬದ್ರುದ್ದೀನ್ ಅಹ್ಸನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಸಂದೇಶ ಭಾಷಣ ಮಾಡಿದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ ಹಾಗೂ ಎಸ್ಸೆಸ್ಸೆಫ್ ಬಂಟ್ವಾಳ ಡಿವಿಶನ್ ಅಧ್ಯಕ್ಷ ಅಕ್ಬರಲಿ ಮದನಿ ಪ್ರಾಸ್ತಾವಿಕ ಭಾಷಣ ಮಾಡಿದರು.
ರಕ್ತದಾನ ಶಿಬಿರದಲ್ಲಿ ಸೆಕ್ಟರ್ ವ್ಯಾಪ್ತಿಯ ಒಟ್ಟು 51 ಮಂದಿ ರಕ್ತದಾನ ಮಾಡಿದರು. ಕೆಪಿ ಅಬ್ದುಲ್ಲಾ ಕೊಳಕೆ ಸ್ವಾಗತಿಸಿ, ಇಬ್ರಾಹಿಂ ಪಿಎಸ್ ಆಲಡ್ಕ ಧನ್ಯವಾದ ಸಮರ್ಪಿಸಿದರು.