ಕೊಲೆ ಯತ್ನ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ
ಕುಂದಾಪುರ, ಫೆ.20: ಮೂರು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣದ ಆರೋಪಿಗೆ ಕುಂದಾಪುರದ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಇಂದು ತೀರ್ಪು ನೀಡಿದೆ.
ಸತೀಶ್ ಪೂಜಾರಿ(28) ಶಿಕ್ಷೆಗೆ ಗುರಿಯಾದ ಆರೋಪಿ. 2015ರ ಡಿ. 27ರ ರಾತ್ರಿ ಕುಂದಾಪುರ ಶಾಸ್ತ್ರಿ ಪಾರ್ಕ್ ಬಳಿ ಆನಗಳ್ಳಿ ಹೇರಿಕುದ್ರಿನ ಗುರುರಾಜ ಪೂಜಾರಿ ಎಂಬವರಿಗೆ ಸತೀಶ್ ಪೂಜಾರಿ ಹಾಗೂ ರೋಹನ್ ಶೇರೆಗಾರ್ ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದರು. ಈ ಪ್ರಕರಣದ ಇನ್ನೋರ್ವ ಆರೋಪಿ ರೋಹನ್ ಶೇರೆಗಾರ್ ಈಗಾಗಲೇ ಮೃತಪಟ್ಟಿದ್ದಾನೆ.
ಪ್ರಕರಣದ 15 ಸಾಕ್ಷಿಗಳನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಪ್ರಕಾಶ್ ಕೆ. ಖಂಡೇರಿ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದರು. ಪ್ರಾಸಿಕ್ಯೂಶನ್ ಪರವಾಗಿ ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು.
Next Story