ಮಂಗಳೂರು: ಎಸಿಬಿ ಎಸ್ಪಿಯಾಗಿ ಉಮಾ ಪ್ರಶಾಂತ್
ಮಂಗಳೂರು, ಫೆ. 22: ಮಂಗಳೂರು ನಗರ ಸಂಚಾರ ಮತ್ತು ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತೆ ಉಮಾ ಪ್ರಶಾಂತ್ ಅವರನ್ನು ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶ ಮಾಡಲಾಗಿದೆ.
ಉಮಾ ಪ್ರಶಾಂತ್ ಅವರು 2017 ಅ.4ರಂದು ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿ, ಮಂಗಳೂರು ನಗರ ಟ್ರಾಫಿಕ್ ಸುಧಾರಣೆ ಮತ್ತು ಅಪರಾಧ ನಿಯಂತ್ರಣಕ್ಕೆ ಶ್ರಮಿಸಿ ಶ್ಲಾಘನೆಗೆ ಪಾತ್ರರಾಗಿದ್ದರು.
ಉಮಾ ಪ್ರಶಾಂತ್ ಅವರ ಸ್ಥಾನಕ್ಕೆ ಈವರೆಗೆ ಯಾವುದೇ ನೇಮಕವಾಗಿಲ್ಲ.
Next Story