ಕಾರಾಗೃಹದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ: ಬಳ್ಳಾರಿ ಜೈಲ್ಗೆ ವಿಚಾರಣಾಧೀನ ಕೈದಿಗಳ ಸ್ಥಳಾಂತರ
ಮಂಗಳೂರು, ಫೆ. 22: ನಗರದ ಉಪಕಾರಾಗೃಹದ ಭದ್ರತಾ ಸಿಬ್ಬಂದಿಗಳಿಬ್ಬರ ಮೇಲೆ ವಿಚಾರಣಾಧೀನ ಕೈದಿಗಳ ತಂಡ ಹಲ್ಲೆ ನಡೆಸಿದ್ದು, ಈ ಸಂಬಂಧ 10 ಮಂದಿ ವಿಚಾರಣಾಧೀನ ಕೈದಿಗಳನ್ನು ಬಳ್ಳಾರಿ ಜೈಲ್ಗೆ ಸ್ಥಳಾಂತರಿಸಲಾಗಿದೆ.
ಕೊಲೆ ಪ್ರಕರಣದ ಆರೋಪಿಯಾಗಿರುವ ಮುಸ್ತಾಕ್ ಹಾಗೂ ಆತನ ಸಹಚರರು ತಪಾಸಣೆ ನಡೆಸುತ್ತಿದ್ದ ಕೈಗಾರಿಕಾ ಭದ್ರತಾ ಪಡೆಯ ಕೀರ್ತಿ ಕುಮಾರ್ ಮತ್ತು ಚಂದ್ರಶೇಖರ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳನ್ನು ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿತ್ತು. ಹಿಂದಿರುಗಿ ಬರುವಾಗ ನಿಯಮ ಪ್ರಕಾರ ಹೊರ ಆವರಣದಲ್ಲಿರುವ ಗೇಟ್ನಲ್ಲಿ ತಪಾಸಣೆ ನಡೆಸಿದ್ದಾರೆ. ಇದನ್ನು ವಿರೊಧಿಸಿ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
10 ಕೈದಿಗಳ ಸ್ಥಳಾಂತರ: ಹಲ್ಲೆ ನಡೆಸಿದ 10 ಮಂದಿ ವಿಚಾರಣಾಧೀನ ಕೈದಿಗಳನ್ನು ಮುಂಜಾಗ್ರತಾ ಕ್ರಮವಾಗಿ ಬಳ್ಳಾರಿ ಜೈಲ್ಗೆ ಸ್ಥಳಾಂತರಿಸಲಾಗಿದೆ ಎಂದು ಜೈಲು ಮೂಲಗಳು ತಿಳಿಸಿವೆ.
Next Story