ಫೆ. 23: ವಿಜಯಾ ಬ್ಯಾಂಕ್ ಉಳಿಸಲು ಆಗ್ರಹಿಸಿ ಸಭೆ
ದ.ಕ.ಜಿಲ್ಲಾ ಕಾಂಗ್ರೆಸ್ ಬೆಂಬಲ
ಮಂಗಳೂರು, ಫೆ. 22: ಕರಾವಳಿಗರ ಹೆಮ್ಮೆಯ ಹಾಗೂ ಲಾಭದಲ್ಲಿರುವ ವಿಜಯಾ ಬ್ಯಾಂಕನ್ನು ಗುಜರಾತ್ ಮೂಲದ ಬ್ಯಾಂಕ್ ಆಫ್ ಬರೋಡಾದ ಜೊತೆ ಲೀನಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ರೋಧಿಸಿ ವಿಜಯಾ ಬ್ಯಾಂಕ್ ಉಳಿಸಿ ಹೋರಾಟ ಸಮಿತಿಯು ಫೆ. 23ರಂದು ಪೂರ್ವಾಹ್ನ 11ಕಕೆ ನಗರದ ಪುರಭವನದಲ್ಲಿ ಹಮ್ಮಿಕೊಂಡಿರುವ ದ.ಕ.ಮತ್ತು ಉಡುಪಿ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳ ನಿರ್ಣಯ ಸಭೆಗೆ ದ.ಕ. ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ಬೆಂಬಲ ಸೂಚಿಸುತ್ತದೆ ಎಂದು ಡಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.
Next Story