ಬಂಟ್ವಾಳ: ಕಾರು ಢಿಕ್ಕಿ; ರಿಕ್ಷಾ ಚಾಲಕನಿಗೆ ಗಾಯ
ಬಂಟ್ವಾಳ, ಫೆ. 23: ಕಾರೊಂದು ಆಟೊ ರಿಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಗಡಿಯಾರ ಸಮೀಪದ ಕಲ್ಲಾಜೆ ಎಂಬಲ್ಲಿ ಶನಿವಾರ ನಡೆದಿದೆ.
ಗಡಿಯಾರದ ನಿವಾಸಿ, ಆಟೋ ಚಾಲಕ ಹಮೀದ್ (50) ಗಾಯಗೊಂಡವರು ಎಂದು ಗುರುತಿಸಲಾಗಿದೆ.
ಕಡೇಶಿವಾಲಯ ಕಡೆಗೆ ತೆರಳುತ್ತಿದ್ದ ಕಾರು ಪೆರ್ಲದಿಂದ ಗಡಿಯಾರಕ್ಕೆ ಬರುತ್ತಿದ್ದ ಆಟೋ ರಿಕ್ಷಾಗೆ ಕಲ್ಲಾಜೆ ಎಂಬಲ್ಲಿ ಢಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾ ಚಾಲಕನಿಗೆ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಆಟೊ ರಿಕ್ಷಾ ಜಖಂಗೊಂಡಿದ್ದು, ಕಾರಿನ ಮುಂಭಾಗ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.
Next Story