ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಪಡುಬಿದ್ರೆ, ಫೆ.23: ಸರಿಯಾದ ಕೆಲಸ ಇಲ್ಲದ ಚಿಂತೆ ಹಾಗೂ ಕುಡಿತದ ಚಟದಿಂದ ಮಾನಸಿಕವಾಗಿ ನೊಂದ ಹೆಜಮಾಡಿಯ ಜಾನ್ಸನ್ ಡಿಸೋಜ(48) ಎಂಬವರು ಫೆ. 22ರಂದು ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದ ನಿಟ್ಟೆ ಗ್ರಾಮದ ಕಲ್ಲಂಬಾಡಿ ಪದವು ನಿವಾಸಿ ನಾರಾಯಣ ಭಂಡಾರಿ(67) ಎಂಬವರು ಮನ ನೊಂದು ಫೆ.23ರಂದು ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story