ಮಾ.2-3ರಂದು ಉಳ್ಳಾಲದಲ್ಲಿ ಅಬ್ಬಕ್ಕ ಉತ್ಸವ: ಸಚಿವ ಖಾದರ್
ಮಂಗಳೂರು, ಫೆ.28: ಈ ಬಾರಿಯ ಅಬ್ಬಕ್ಕ ಉತ್ಸವ ಉಳ್ಳಾಲ ಕಡಲತೀರದಲ್ಲಿ ಮಾರ್ಚ್ 2 ಮತ್ತು 3ರಂದು ನಡೆಯಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಈ ಬಾರಿಯ ಅಬ್ಬಕ್ಕ ಉತ್ಸವದಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2018-19ನೇ ಸಾಲಿನ ಪ್ರಶಸ್ತಿಯನ್ನು ಸಾಹಿತಿ ಪತ್ರಕರ್ತೆ ಡಾ.ಸಂಧ್ಯಾ ಎಸ್. ಪೈ ಹಾಗೂ ಸಾಹಿತ್ಯೇತರ ಕ್ಷೇತ್ರದ ಪ್ರಶಸ್ತಿಯನ್ನು ಉದ್ಯಮಿ ಉರ್ಮಿಳಾ ರಮೇಶ್ ಕುಮಾರ್ ಅವರಿಗೆ ನೀಡಲಾಗುವುದು ಎಂದು ಹೇಳಿದರು.
ಉತ್ಸವದಂಗವಾಗಿ ಮಾರ್ಚ್ 2ರಂದು 7 ಗಂಟೆಗೆ ಉಳ್ಳಾಲ ಸರ್ಕಲ್ನಿಂದ ಮಂಗಳೂರು ವಿಶ್ವವಿದ್ಯಾನಿಲಯದವರೆಗೆ ರಾಜ್ಯಮಟ್ಟದ ಪುರುಷರ ಹಾಗೂ ಮಹಿಳೆಯರ ಮುಕ್ತ ಹಾಪ್ ಮ್ಯಾರಥಾನ್ ಸ್ಪರ್ಧೆ, ಫುಟ್ಬಾಲ್ ಪಂದ್ಯಾಟ, ದೋಣಿ ಸ್ಪರ್ಧೆ, ಈಜು ಸ್ಪರ್ಧೆ, ಸಾಂಪ್ರದಾಯಿಕ ಬಲೆ ಬೀಸಿ ಮೀನು ಹಿಡಿಯುವ ಸ್ಪರ್ಧೆ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ.
ಮಾರ್ಚ್ 3ರಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ಹಾಗೂ ಅಬ್ಬಕ್ಕ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆಂದು ಎಂದು ಸಚಿವಖಾದರ್ ತಿಳಿಸಿದ್ದಾರೆ