ಕೇಂದ್ರ ಸಾರಿಗೆ ಸಚಿವರ ಕಾರ್ಯದರ್ಶಿಯಿಂದ ತೊಕ್ಕೊಟ್ಟು ಫ್ಲೈಓವರ್ ಕಾಮಗಾರಿ ಪರಿಶೀಲನೆ
ಮಂಗಳೂರು, ಫೆ.28: ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಯನ್ನು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವರ ಕಾರ್ಯದರ್ಶಿ ವೈಭವ್ ದಾಂಘೆ ಗುರುವಾರ ಪರಿಶೀಲಿಸಿದರು.
ಮಂಗಳೂರಿಗೆ ಇಂದು ಆಗಮಿಸಿದ್ದ ವೈಭವ್ ದಾಂೆಯವರು ಸಂಸದ ನಳಿನ್ ಕಟೀಲು ಜೊತೆ ತೊಕ್ಕೊಟ್ಟಿಗೆ ತೆರಳಿ ಮೇಲ್ಸೇತುವ ಕಾಮಗಾರಿಯನ್ನು ವೀಕ್ಷಿಸಿದರು.
ಈ ಸಂದರ್ಭ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮಂಡಲ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಚಂದ್ರಹಾಸ್ ಉಳ್ಳಾಲ್, ಚಂದ್ರಶೇಖರ್, ರಾಮಚಂದ್ರ ಬೈಕಂಪಾಡಿ, ಸತೀಶ್ ಕುಂಪಲ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳ ಹಾಗೂ ನವಯುಗ ಕಂಪೆನಿಯ ಅಧಿಕಾರಿಗಳು ಉಪಸ್ಥಿತರಿದ್ದರು.