ಕಾವೂರು ದೇವಸ್ಥಾನದಲ್ಲಿ ಶಿವರಾತ್ರಿ ಕಾರ್ಯಕ್ರಮಕ್ಕೆ ಪೊಲೀಸರ ಅಡ್ಡಿ: ಖಂಡನೆ
ಮಂಗಳೂರು, ಮಾ.6: ನಗರದ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.4ರಂದು ಶಿವರಾತ್ರಿ ಸಮಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮಕ್ಕೆ ಪೊಲೀಸರು ಏಕಾಏಕಿಯಾಗಿ ಬಂದು ಅಡ್ಡಿಪಡಿಸಿರುವುದು ಖಂಡನೀಯ. ಈ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಮೇಯರ್ ಹರಿನಾಥ್ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹಳ ಹಳೆಯ ದೇವಸ್ಥಾನ ಅದಕ್ಕೂ ಮಿಗಿಲಾಗಿ ಧಾರ್ಮಿಕ ಕಾರ್ಯಕ್ರಮದಲ್ಲಿ ಈ ರೀತಿಯಾಗಿ ಪೊಲೀಸರು ನಡೆದುಕೊಳ್ಳುವುದು ಸರಿಯಲ್ಲ ಇಂತಹ ಬೆಳವಣಿಗೆ ಮುಂದೆ ನಡೆಯಬಾರದು ಎಂದು ಜಿಲ್ಲಾ ಉಸ್ತುವಾರಿ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮನಪಾ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ, ಪ್ರಮುಖರಾದ ದೀಪಕ್ ಪೂಜಾರಿ, ಉತ್ತಮ ಆಳ್ವ, ಸುಮಂತ್ ರಾವ್ ಉಪಸ್ಥಿತರಿದ್ದರು.
Next Story