ಉಪ್ಪಿನಂಗಡಿ: ಸರಕಾರಿ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ
ಉಪ್ಪಿನಂಗಡಿ,ಮಾ.11: ವಿದ್ಯಾರ್ಥಿಗಳ ಬೆಳವಣಿಗೆ ಅವರ ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಅಡಗಿದೆ. ವಿದ್ಯಾರ್ಥಿ ಜೀವನದಲ್ಲಿ ಗಳಿಸಿದ ವ್ಯಕ್ತಿತ್ವ ಅವರ ಜೀವನದುದ್ದಕ್ಕೂ ಸಹಕಾರಿಯಾಗಲಿದೆ ಎಂದು ಬಂಟ್ವಾಳ ಸ.ಪ್ರ.ದ ಕಾಲೇಜು ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ಹೈದರಾಲಿ ಹೇಳಿದರು.
ಉಪ್ಪಿನಂಗಡಿ ಸ.ಪ್ರ.ದ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಆಯೋಜಿಸಿದ 'ವ್ಯಕ್ತಿತ್ವ ವಿಕಸನ' ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಸುಬ್ಬಪ್ಪ ಕೈಕಂಬ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಗಾರದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ.ಅಹಮ್ಮದ್ ಎಸ್.ಎಂ, ಉಪನ್ಯಾಸಕ ವೃಂದದವರು ಹಾಗೂ ಬಿ.ಕಾಂ, ಬಿ.ಬಿ.ಎ ವಿದ್ಯಾರ್ಥಿಗಳು ಹಾಜರಿದ್ದರು.
ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಸ್ನೇಹ ಸ್ವಾಗತಿಸಿ, ಸೌಮ್ಯ ಕಾರ್ಯಕ್ರಮವನ್ನು ನಿರೂಪಿಸಿ, ಸುನಿತಾ ವಂದಿಸಿದರು.
Next Story