ಗಾಂಜಾ ಸೇವನೆ: ಆರೋಪಿ ಬಂಧನ
ಮಂಗಳೂರು, ಮಾ.18: ಅಮಲು ಪದಾರ್ಥ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಲ್ಲಿ ಯುವಕನನ್ನು ತೊಕೊಟ್ಟು ಪಂಡಿತ್ ಹೌಸ್ ಬಸ್ ನಿಲ್ದಾಣ ಬಳಿ ಸೋಮವಾರ ಎಕನಾಮಿಕ್ಸ್ ಆ್ಯಂಡ್ ನಾರ್ಕೊಟಿಕ್ಸ್ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ಗೌರವ್ ಕೈಯ (21) ಬಂಧಿತ ಆರೋಪಿ.
ಸೋಮವಾರ ಬೆಳಗ್ಗೆ 10 ಗಂಟೆ ಸುಮಾರು ಎಕನಾಮಿಕ್ಸ್ ಆ್ಯಂಡ್ ನಾರ್ಕೊಟಿಕ್ಸ್ ಠಾಣಾ ಪೊಲೀಸರಿಗೆ ಬಂದ ಖಚಿತ ಮಾಹಿತಿಯಂತೆ ತೊಕೊಟ್ಟು ಪಂಡಿತ್ ಹೌಸ್ ಬಸ್ ನಿಲ್ದಾಣ ಬಳಿ ದಾಳಿ ನಡೆಸಿದರು. ಆರೋಪಿಯು ಅಮಲು ವಸ್ತುವನ್ನು ಸೇವಿಸಿ ನಶೆಯಲ್ಲಿ ರಸ್ತೆಯಲ್ಲಿ ನಡೆದಾಡುವ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದನು. ಆರೋಪಿಯನ್ನು ವಶಕ್ಕೆ ಪಡೆದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಿದಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.
ಈ ಕುರಿತು ಎಕನಾಮಿಕ್ಸ್ ಆ್ಯಂಡ್ ನಾರ್ಕೊಟಿಕ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story