ಮಾ. 23ರಿಂದ ಕಾರಾಜೆಯಲ್ಲಿ ಸ್ವಲಾತ್ ಮಜ್ಲಿಸ್
ಬಂಟ್ವಾಳ, ಮಾ. 19: ತಾಲೂಕಿನ ಸಜಿಪಮೂಡ ಗ್ರಾಮದ ಕಾರಾಜೆ ನೂರುಲ್ ಹುದಾ ಜುಮಾ ಮಸೀದಿ ಆಶ್ರಯದಲ್ಲಿ 16ನೆ ಸ್ವಲಾತ್ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ ಕಾರ್ಯಕ್ರಮಗಳು ಮಾ. 23 ಹಾಗೂ 24 ರಂದು ಮಸೀದಿ ವಠಾರದ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.
ಮಸೀದಿ ಖತೀಬ್ ಒ.ಕೆ. ಶಹೀದ್ ಮುಸ್ಲಿಯಾರ್ ಉದ್ಘಾಟಿಸಲಿದ್ದು, ಅಧ್ಯಕ್ಷ ಕೆ. ಶೇಖಬ್ಬ ಹಾಜಿ ಅಧ್ಯಕ್ಷತೆ ವಹಿಸುವರು. ಸೈಯದ್ ಅಮೀರ್ ಅಸ್ಸಖಾಫ್ ತಂಙಳ್ ನಾದಾಪುರ ಸ್ವಲಾತ್ ಮಜ್ಲಿಸ್ ನೇತೃತ್ವ ವಹಿಸಲಿದ್ದು, ಮಿತ್ತೂರು ಕೆಜಿಎನ್ ದಅವಾ ಕಾಲೇಜು ಮುದರ್ರಿಸ್ ಮುಹಮ್ಮದ್ ಹುಸೈನ್ ಅಹ್ಸನಿ ಅಲ್-ಮುಈನಿ ಮುಖ್ಯ ಭಾಷಣಗೈಯುವರು ಎಂದು ಮಸೀದಿ ಪ್ರಕಟನೆ ತಿಳಿಸಿದೆ.
Next Story