ಪತ್ನಿಯ ಸಾವಿನ ಚಿಂತೆಯಲ್ಲಿ ಪತಿ ಆತ್ಮಹತ್ಯೆ
ಬೈಂದೂರು, ಮೇ 13: ಪತ್ನಿ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾದ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 11ರಂದು ರಾತ್ರಿ ವೇಳೆ ಕಾಲ್ತೊಡು ಗ್ರಾಮದ ಬೀಜಮಕ್ಕಿ ಎಂಬಲ್ಲಿ ನಡೆದಿದೆ.
ಮೃತರನ್ನು ಬೀಜಮಕ್ಕಿಯ ಕಾನಕುಳಿ ನಿವಾಸಿ ಸುಬ್ರಹ್ಮಣ್ಯ (46) ಎಂದು ಗುರುತಿಸಲಾಗಿದೆ. ಇವರ ಪತ್ನಿ ಕುಸುಮಾ ಒಂದು ವರ್ಷದ ಹಿಂದೆ ಮೃತಪಟ್ಟಿದ್ದು ಇದೇ ವಿಷಯದಲ್ಲಿ ಸುಬ್ರಹ್ಮಣ್ಯ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆ ನ್ನಲಾಗಿದೆ.
ಮೇ 11ರಂದು ಸಂಜೆ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದ ಸುಬ್ರಹ್ಮಣ್ಯ ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆ ಸಮೀಪದ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story