ಪ.ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಉಡುಪಿ, ಮೇ 18: ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಿದ್ದು, ಈ ಯೋಜನೆಯ ಸರಳೀಕರಣ ಹಾಗೂ ಶಿಷ್ಯವೇತನ ಮಂಜೂರಾತಿಗಾಗಿ 2019-20ನೇ ಸಾಲಿನಲ್ಲಿ ಅರ್ಹ ಅ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅ್ಯರ್ಥಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಾಗಿರಬೇಕು. ಅರ್ಜಿ ಸಲ್ಲಿಸುವ ದಿನಕ್ಕೆ ಕಾನೂನು ಪದವಿ ತೇರ್ಗಡೆಯಾಗಿ 2 ವರ್ಷ ಮೀರಿರ ಬಾರದು. ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಸಂಸ್ಥೆ/ ವಿವಿಯಿಂದ 3 ಅಥವಾ 5 ವರ್ಷಗಳ ಕಾನೂನು ಪದವಿ ಪಡೆದಿರಬೇಕು. ಅ್ಯರ್ಥಿ ಬಾರ್ ಕೌನ್ಸಿಲ್ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿರಬೇಕು.
ಅರ್ಜಿಯನ್ನು ಇಲಾಖೆ ವೆಬ್ಸೈಟ್-www.sw.kar.nic.in - ಮೂಲಕ ಪಡೆಯಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು 15 ದಿನಗಳ ಒಳಗೆ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.