ಕುಂದಾಪುರ: ಬಂಟ್ಸ್ ಕ್ರಿಕೆಟ್ ಟ್ರೋಫಿ ಪಂದ್ಯಾಟಕ್ಕೆ ಚಾಲನೆ
ಕುಂದಾಪುರ, ಮೇ 19: ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟ್ಸ್ ಕ್ರಿಕೆಟ್ ಟ್ರೋಫಿ ಪಂದ್ಯಾಟವನ್ನು ರವಿವಾರ ಇಲ್ಲಿನ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿತ್ತು.
ಪಂದ್ಯಾಟವನ್ನು ಉದ್ಘಾಟಿಸಿದ ಮಂಗಳೂರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಬಂಟರು ಈಗ ಸಂಘಟಿತರಾಗಿದ್ದು, ಸಂಘಟನೆ ಮೂಲಕ ಸಮಾಜಮುಖಿ ಸೇವೆಗಳನ್ನು ಮಾಡಲಾಗುತ್ತಿದೆ. ಕ್ರಿಕೆಟ್ ಪಂದ್ಯಾವಳಿ ಮೂಲಕ ಒಗ್ಗಟ್ಟಾಗಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದರು.
ಆಜ್ರಿ ಚೋನಮನೆ ಶ್ರೀ ಶನೀಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಶೋಕ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘ ಕುಂದಾಪುರದ ಸಹ ಸಂಚಾಲಕ ಆವರ್ಸೆ ಸುಧಾಕರ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ಸಿ.ಎ. ಅಸೋಸಿಯೇಶನ್ನ ರಾಜ್ಯಾಧ್ಯಕ್ಷ ರಾಘವೇಂದ್ರ ಶೆಟ್ಟಿ, ಆನಗಳ್ಳಿ ಶಿಪ್ರಸಾದ್ ಹೆಗ್ಡೆ, ಯುವ ಬಂಟರ ಸಂಘದ ಗೌರವಾಧ್ಯಕ್ಷ ಸುಕೇಶ್ ಶೆಟ್ಟಿ ಹೊಸಮಠ, ಪ್ರಧಾನ ಕಾರ್ಯದರ್ಶಿ ಗಣೇಶ್ ಶೆಟ್ಟಿ ಕಟ್ಕೆರೆ, ಕೋಶಾಧಿಕಾರಿ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ಕ್ರೀಡಾ ಸಂಚಾಲಕರಾದ ಸುನಿಲ್ ಶೆಟ್ಟಿ ಹೇರಿಕುದ್ರು, ರವಿಶಂಕರ ಹೆಗ್ಡೆ ದಬ್ಬಾಡಿ, ಸ್ಥಾಪಕಾಧ್ಯಕ್ಷ ಅಂಪಾರು ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.
ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕೊಡ್ಲಾಡಿ ಸ್ವಾಗತಿಸಿದರು. ಅಕ್ಷಯ್ ಕಾರ್ಯಕ್ರಮ ನಿರೂಪಿಸಿದರು.