ಠಾಣೆಗೆ ಕಲ್ಲೆಸೆತ ಪ್ರಕರಣ: ಮತ್ತೋರ್ವನ ಬಂಧನ
ಕುಂದಾಪುರ, ಮೇ 18: ಅಕ್ರಮ ಮರಳುಗಾರಿಕೆ ಸಂಬಂಧ ಓಮ್ನಿ ಕಾರನ್ನು ವಶಪಡಿಸಿಕೊಂಡಿರುವ ವಿಚಾರದಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಕಲ್ಲೆ ಎಸೆದು, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ.
ಈ ಮೂಲಕ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆ. ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 19 ಮಂದಿಯನ್ನು ಗುರುತಿಸಲಾಗಿದ್ದು, ಉಳಿದವರ ಮಾಹಿತಿಯನ್ನು ಪೊಲೀಸರು ಕಳೆ ಹಾಕುತ್ತಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಶೋಧ ಕಾರ್ಯ ಮುಂದುವರೆಸಲಾಗಿದೆ.
Next Story