ಬಾವಿಗೆ ಬಿದ್ದು ಕೃಷಿಕ ಮೃತ್ಯು
ಶಂಕರನಾರಾಯಣ, ಮೇ 21: ಕೃಷಿಕರೊಬ್ಬರು ಅಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮೇ 21ರಂದು ಶಂಕರನಾರಾಯಣ ಗ್ರಾಮದ ಸಸಿಹಿತ್ಲು ಎಂಬಲ್ಲಿ ನಡೆದಿದೆ.
ಮೃತರನ್ನು ಸಸಿಹಿತ್ಲುವಿನ ಚಿಕ್ಕ ಮರಕಾಲ(64) ಎಂದು ಗುರುತಿಸಲಾಗಿದೆ.
ಇವರು ಬೆಳಗ್ಗೆ 10ಗಂಟೆಗೆ ಮನೆಯ ಬಳಿಯ ಕೃಷಿ ಗದ್ದೆಗೆ ನೀರು ಹಾಯಿಸಿ ಬಾವಿಯಲ್ಲಿ ಇಣುಕಿದಾಗ ಆಕಸ್ಮಿಕವಾಗಿ ಆಯತಪ್ಪಿಕಾಲು ಜಾರಿ ಬಾವಿಗೆ ಬಿದ್ದರೆನ್ನಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಇವರು ಮಧ್ಯಾಹ್ನ 2:40ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story