ಬಾವಿಗೆ ಬಿದ್ದು ಮೃತ್ಯು
ಶಂಕರನಾರಾಯಣ, ಮೇ 22: ಅಕಸ್ಮಿಕವಾಗಿ ಆಯತಪ್ಪಿ ಕಾಲು ಜಾರಿ ಬಾವಿಗೆ ಬಿದ್ದ ವೃದ್ಧರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದ ಸಸಿಹಿತ್ಲು ಎಂಬಲ್ಲಿಂದ ವರದಿಯಾಗಿದೆ.
ಚಿಕ್ಕ ಮರಕಾಲ (64) ಎಂಬವರು ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ತನ್ನ ಮನೆಯ ಬಳಿ ಇರುವ ಕೃಷಿ ಗದ್ದೆಗೆ ನೀರು ಹಾಯಿಸಿ ಬಾವಿಯಲ್ಲಿ ಉಳಿದಿರುವ ನೀರನ್ನು ನೋಡಲು ಇಣುಕಿದಾಗ ಅಕಸ್ಮಿಕವಾಗಿ ಆಯತಪ್ಪಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿದ್ದು, ಮನೆ ಹಾಗೂ ಊರಿನವರು ಸೇರಿ ಬಾವಿಯಿಂದ ಮೇಲಕ್ಕೆತ್ತಿ ಉಪಚರಿಸಿ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ಸೇರಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಅಪರಾಹ್ನ 2:40ರ ಸುಮಾರಿಗೆ ಮೃತಪಟ್ಟರು ಎಂದು ಪ್ರಕರಣ ದಾಖಲಿಸಿಕೊಂಡಿರುವ ಶಂಕರನಾರಾಯಣ ಪೊಲೀಸರು ತಿಳಿಸಿದ್ದಾರೆ.
Next Story