ಪ್ರಕಟವಾಗದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಫಲಿತಾಂಶ: ಮಾಧ್ಯಮದವರಿಂದ ಆಕ್ರೋಶ
ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಮತ ಎಣಿಕೆ ಫಲಿತಾಂಶ ವಿವರ ನೀಡಿದ ಹಿನ್ನೆಲೆಯಲ್ಲಿ ಮಾಧ್ಯಮದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಬೇರೆ ಕ್ಷೇತ್ರದಲ್ಲಿ ಮೂರು ಸುತ್ತಿನ ಫಲಿತಾಂಶ ಬಂದರೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಫಲಿತಾಂಶದ ವಿವರವನ್ನು ಚುನಾವಣಾ ಆಯೋಗದ ಅಧಿಕೃತ ವೆಬ್ ಸೈಟ್ ನಲ್ಲಿ ಬೆಳಿಗ್ಗೆ 9.30 ವರೆಗೆ ಪ್ರಕಟಿಸದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಲಾಯಿತು.
ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು ಸ್ಪಷ್ಟನೆ ನೀಡುವಂತೆ ಆಗ್ರಹಿಸಿದರು.
Next Story