ಕುಂದಾಪುರ: ಮೇ 25ರಂದು ಕೃಷಿ ಕೂಲಿಕಾರರ ಜಿಲ್ಲಾ ಸಮಾವೇಶ
ಕುಂದಾಪುರ, ಮೇ 24: ಉಡುಪಿ ಜಿಲ್ಲೆಯಾದ್ಯಂತ ವಸತಿ ಮತ್ತು ನಿವೇಶನ ರಹಿತರು ನಿವೇಶನಕ್ಕಾಗಿ ಭೂಮಿ ಮಂಜೂರಾತಿ ಮತ್ತು ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಒತ್ತಾಯಿಸಿ ಹೋರಾಟವೊಂದನ್ನು ರೂಪಿಸಲು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕೃಷಿ ಕೂಲಿಕಾರರ ಜಿಲ್ಲಾ ಸಮಾವೇಶ ಕುಂದಾಪುರದ ಕಾರ್ಮಿಕ ಭವನದಲ್ಲಿ ನಾಳೆ ಮೇ 25ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ (ಎಐಎಡಬ್ಲುಯು) ಕರ್ನಾಟಕ ರಾಜ್ಯಾಧ್ಯಕ್ಷ ನಿತ್ಯಾನಂದ ಸ್ವಾಮಿ ಸಮಾವೇಶವನ್ನು ಉದ್ಘಾಟಿಸಲಿ ದ್ದಾರೆ. ನಿವೇಶನ ರಹಿತ ಅರ್ಜಿದಾರರು, ಉದ್ಯೋಗ ಖಾತ್ರಿ ಯೋಜನೆಯ ಕಾಯಕ ಬಂಧುಗಳು ಈ ಸಮಾವೇಶದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story