ಕುಂದಾಪುರ: ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ
ಉಡುಪಿ, ಮೇ 24: ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಬಸ್ ನಿಲ್ದಾಣ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್ಗಳು, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ದಾಳಿ ನಡೆಸಿ ಒಟ್ಟು 39 ಪ್ರಕರಣಗಳನ್ನು ದಾಖಲಿಸಿ 4,800 ರೂ. ದಂಡ ವಸೂಲಿ ಮಾಡಲಾಗಿದೆ.
ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ, ನಾಗೂಷಣ್ ಉಡುಪ, ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಉಮೇಶ್, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಆನಂದ ಗೌಡ, ಹಿರಿಯ ಆರೋಗ್ಯ ಸಹಾಯಕ ಸದಾನಂದ ಹೆಬ್ಬಾರ್, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ದತ್ತಾತ್ರೇಯ, ಜಿಲ್ಲಾ ಎನ್ಸಿಡಿ ಘಟಕದ ಜಿಲ್ಲಾ ಸಲಹೆಗಾರ ಡಾ.ಆಪನ್, ರಾಷ್ಟ್ರೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ ಎನ್ಟಿಸಿಪಿ ಸಮಾಜಕಾರ್ಯಕರ್ತೆ ಶೈಲಾ ಎಸ್. ಎಂ, ಡಾ. ಶಿಜಿನಿ ಮುಂತಾದವರು ಉಪಸ್ಥಿತರಿದ್ದರು.