ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಭಟ್ಕಳ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಅಪಘಾತವೊಂದರಲ್ಲಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಇಲ್ಲಿನ ವೆಂಕಟಪುರ ರಾಷ್ಟ್ರೀಯ ಹೆದ್ದಾರಿ 66ರ ಕುಕ್ಕನೀರ ಕ್ರಾಸ್ ಹತ್ತಿರ ಶನಿವಾರ ಮಧ್ಯರಾತ್ರಿ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಬಂದರ ವ್ಯಾಪ್ತಿಯ ಕರಿಕಲ್ ನಿವಾಸಿ ವೆಂಕಟೇಶ ಲಕ್ಷಣ ಮೋಗೇರ ಎಂದು ತಿಳಿದು ಬಂದಿದೆ. ವೆಂಕಟೇಶ ಅವರು ಶಿರಾಲಿಯಿಂದ ಕರಿಕಲ್ ಮನೆ ಕಡೆಗೆ ಸಾಗುತ್ತಿದ್ದ ವೇಳೆ ಅತಿ ವೇಗವಾಗಿ ಮಂಗಳೂರು ನಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಬೈಕ್ ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಮೃತ ವ್ಯಕ್ತಿ ಉಡುಪಿಯ ಮಲ್ಪೆಯಲ್ಲಿ ಮೊಬೈಲ್ ಅಂಗಡಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದು ಎರಡು ದಿನದ ಹಿಂದೆ ಊರಿಗೆ ಬಂದಿದ್ದರು ಎನ್ನಲಾಗಿದೆ.
ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story