ಮದ್ಯರಾತ್ರಿ ಗುಡುಗು ಸಹಿತ ಗಾಳಿ ಮಳೆ: ಹಲವು ಕಡೆಗಳಲ್ಲಿ ಹಾನಿ
ಪುತ್ತೂರು: ಶನಿವಾರ ಮದ್ಯರಾತ್ರಿ ಪುತ್ತೂರು ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
ಪುತ್ತೂರು- ಪಾಣಾಜೆ ರಸ್ತೆಯ ರೆಂಜ ಎಂಬಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಮುರಿದು ಬಿದ್ದಿದ್ದು, ಇದರಿಂದಾಗಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಭಾನುವಾರ ಬೆಳಿಗ್ಗೆ ಮರವನ್ನು ಸಂಪೂರ್ಣವಾಗಿ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಪುತ್ತೂರು ತಾಲೂಕಿನ ಅರ್ಯಾಪು ಗ್ರಾಮದ ಕುಂಜೂರುಪಂಜ ಎಂಬಲ್ಲಿ ಪಂಚಾಯತ್ನಿಂದ ನಿರ್ಮಿಸಲಾಗಿದ್ದ ಪ್ರಯಾಣಿಕರ ಬಸ್ಸು ತಂಗುದಾಣದ ಶೀಟ್ ಗಾಳಿಗೆ ಹಾರಿ ಹೋಗಿದೆ.
ಹಲವು ಕಡೆಗಳಲ್ಲಿ ಅಡಿಕೆ ತೋಟಗಳಿಗೆ ಹಾನಿಯಾಗಿದ್ದು, ಅಡಿಕೆ ಮರಗಳು ಗಾಳಿಗೆ ಮುರಿದು ಬಿದ್ದಿದೆ.
Next Story