ಬ್ರಹ್ಮಾವರ: ಬಿಜೆಪಿಯಿಂದ ಮತದಾರರ ಅಭಿನಂದನಾ ಕಾರ್ಯಕ್ರಮ
ಬ್ರಹ್ಮಾವರ, ಜೂ.2: ಈ ಬಾರಿಯ ಚುನಾವಣೆಯಲ್ಲಿ ಉಡುಪಿ ಚಿಕ್ಕ ಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಭಾರೀ ಅಂತರದಿಂದ ಗೆಲವು ಸಾಧಿಸಲು ಶ್ರಮಿಸಿದ ಕಾರ್ಯಕರ್ತರಿಗೆ ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲದ ವತಿಯಿಂದ ಅಭಿನಂದನಾ ಕಾರ್ಯಕ್ರಮ ವನ್ನು ರವಿವಾರ ಏರ್ಪಡಿಸಲಾಗಿತ್ತು.
ಗ್ರಾಪಂ ಮಟ್ಟದ ಕಾರ್ಯಕರ್ತರನ್ನು ಅಭಿನಂದಿಸಿದ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಮುಂದಿನ ದಿನಗಳಲ್ಲಿ ಗ್ರಾಮಾಂತರ ಭಾಗಕ್ಕೆ ಅತೀ ಹೆಚ್ಚಿನ ಅನುದಾನವನ್ನು ತಂದು ಅಭಿವೃದ್ಧಿ ಪಡಿಸುವ ಪ್ರಾಮಾಣಿಕ ಪ್ರಯತ್ನ ವನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.
ಹೆಚ್ಚಿನ ಅಂತರವನ್ನು ತಂದುಕೊಟ್ಟ ಗ್ರಾಮಾಂತರ ಭಾಗದ ಜನತೆಗೆ ಶಾಸಕ ಶಾಸಕ ಕೆ.ರಘುಪತಿ ಭಟ್ ಕೃತಜ್ಞತೆ ಸಲ್ಲಿಸಿದರು.
ಅಧ್ಯಕ್ಷತೆಯನ್ನು ಜಿಪಂ ಸದಸ್ಯ ಪ್ರತಾಪ್ ಹೆಗ್ಡೆ ಮಾರಳ್ಳಿ ವಹಿಸಿದ್ದರು.ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶೀಲಾ ಕೆ.ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದ್ಯಾ ರಮೇಶ್ ಮೊದಲಾದವರು ಉಪಸ್ಥಿತರಿದ್ದರು.