ವಿದ್ಯುತ್ ತಂತಿ ತಗುಲಿ ಮಹಿಳೆ ಮೃತ್ಯು
ಬೈಂದೂರು, ಜೂ.14: ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ತುಳಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಪ್ಪುಂದ ಗ್ರಾಮದ ಚಮಟೆ ಹರಳು ಎಂಬಲ್ಲಿ ಜೂ.13ರಂದು ಬೆಳಗ್ಗೆ 11:50ರ ಸುಮಾರಿಗೆ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಶಾರದಾ ಶೆಡ್ತಿ ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪದ ತೋಡಿನಲ್ಲಿ ನಡೆದುಕೊಂಡು ಹೋಗುತ್ತಿದ್ದು, ಈ ವೇಳೆ ತೋಡಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಶಾರದಾ ಶೆಡ್ತಿ ಸ್ಥಳಲ್ಲಿಯೇ ಮೃತಪಟ್ಟರೆನ್ನಲಾಗಿದೆ.
ಬೈಂದೂರು ಮೆಸ್ಕಾಂ ಶಾಖೆಯ ಉಪ್ಪುಂದ ಲೈನ್ಮ್ಯಾನ್ ಹಾಗೂ ಮೆಸ್ಕಾಂ ಅಧಿಕಾರಿಗಳು ಜಾಗದಲ್ಲಿ ಹಾದು ಹೋಗಿರುವ ವಿದ್ಯುತ್ ಮಾರ್ಗಗಳನ್ನು ಸರಿಯಾಗಿ ನಿರ್ವಹಿಸದೆ ಹಾಗೂ ಮಳೆಗಾಲಕ್ಕೆ ಮುನ್ನ ಯಾವುದೇ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯತನ ವಹಿಸಿರುವುದು ಈ ಅವಘಡಕ್ಕೆ ಕಾರಣ ವಾಗಿದೆ ಎಂದು ಸತೀಶ್ ಶೆಟ್ಟಿ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story