ಸೋಮವಾರ ಕೆಎಂಸಿ ಮಣಿಪಾಲದಲ್ಲಿ ಹೊಸರೋಗಿ ವಿಭಾಗದ ಸೇವೆ ಲಭ್ಯವಿಲ್ಲ
ಮಣಿಪಾಲ, ಜೂ.15: ಪಶ್ಚಿಮ ಬಂಗಾಳದಲ್ಲಿ ಯುವ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಸ್ಥೆ ಜೂ.17ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ಅದರಂತೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ, ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆ, ಕಾರ್ಕಳದ ಡಾ.ಟಿಎಂಎ ಪೈ ಆಸ್ಪತ್ರೆಗಳ ಹೊರರೋಗಿ ವಿಭಾಗದ ಸೇವೆಯು ಅಂದು ಬೆಳಗ್ಗೆ 6 ರಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಲಭ್ಯವಿರುವುದಿಲ್ಲ ಎಂದು ಕೆಎಂಸಿ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಆದರೆ ಈ ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರಿಗೆ ಆಗುವ ತೊಂದರೆಗಳಿಗೆ ವಿಷಾಧಿಸುತ್ತೇವೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story