ಕಾರು ಢಿಕ್ಕಿ: ಪಾದಾಚಾರಿ ಮೃತ್ಯು
ಕೋಟ, ಜೂ.15: ಪಾಂಡೇಶ್ವರ ಗ್ರಾಮದ ಸಾಸ್ತಾನ ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜೂ.14ರಂದು ರಾತ್ರಿ 11.45ರ ಸುಮಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾದಿದೆ.
ಮೃತರನ್ನು ಗುರು(35) ಎಂದು ಗುರುತಿಸಲಾಗಿದೆ.
ಕುಂದಾಪುರ ಕಡೆ ಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ರಸ್ತೆ ದಾಟಲು ನಿಂತಿದ್ದ ಗುರು ಅವರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಗುರು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕರೆದು ಕೊಂಡು ಬರುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story